ಜಿಲ್ಲಾ ಸುದ್ದಿ

ದಲಿತ ಮುಖಂಡ, ಸಂಘಟಕ ರಾಜ ಪಲ್ಲಮಜಲು ನಿಧನ

ಬಂಟ್ವಾಳ: ದಲಿತ ಮುಖಂಡ, ಸಂಘಟಕ, ಸಾಮೂಹಿಕ ವಿವಾಹ ಏರ್ಪಡಿಸುವ ಮೂಲಕ ಗಮನ ಸೆಳೆದಿದ್ದ ಬಂಟ್ವಾಳದ ರಾಜ ಪಲ್ಲಮಜಲು (53) ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನ ಹೊಂದಿದರು. ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ.  ನವಚೇತನ ಸೇವಾ ಟ್ರಸ್ಟ್ ಬಂಟ್ವಾಳ ಇದರ ಅಧ್ಯಕ್ಷರಾಗಿ ಸುಮಾರು 18 ವರ್ಷಗಳಿಂದ ಸಾಮೂಹಿಕ ವಿವಾಹಗಳನ್ನು ವರ್ಷಂಪ್ರತಿ ಏರ್ಪಡಿಸುತ್ತಾ ಬರುತ್ತಿದ್ದ ಅವರು ರಾಯಿಯಲ್ಲಿ ಉದ್ಯಮವನ್ನು ಸ್ಥಾಪಿಸಿದ್ದರು. ಹಲವು ಸಾಮಾಜಿಕ ,ಶೈಕ್ಷಣಿಕ,ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ದಲಿತರ ಮತ್ತು ಸಾಮಾಜಿಕ ನ್ಯಾಯ ವಂಚಿತರ ಪರ ಧ್ವನಿಯಾಗಿದ್ದರು. ಜಿಲ್ಲೆಯಲ್ಲಿ ನಡೆದ ಹಲವು ದಲಿತರ  ಹೋರಾಟಗಳಲ್ಲಿ  ಮುಂಚೂಣಿಯಲ್ಲಿ ಇರುತಿದ್ದರು.ಸಾರ್ವಜನಿಕ ಉಚಿತ ಸಾಮೂಹಿಕ ವಿವಾಹ ನಡೆಸುವ ಮೂಲಕ ಉತ್ತಮ ಸಮಾಜ ಸೇವಕ ಎನಿಸಿಕೊಂಡಿದ್ದರು.ಇವರ ಅಕಾಲಿಕ ಅಗಲಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಡಿ ಕೆ  ಡಿಸ್ಟ್ರಿಕ್ಟ್  ಅಂಬೇಡ್ಕರ್ ಫೋರಂ  ಫಾರ್ ಸೋಷಿಯಲ್ ಜಸ್ಟಿಸ್ ಅಧ್ಯಕ್ಷ ಭಾನುಚಂದ್ರ ಕೃಷ್ಣಾಪುರ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ