COVID ಹಿನ್ನೆಲೆ: ಬಂಟ್ವಾಳದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ: ರಾಜೇಶ್ ನಾಯ್ಕ್

ಬಂಟ್ವಾಳ: ಎಂಸಿಎಫ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಿಸಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಶೀಘ್ರದಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಈ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 25 ಆಕ್ಸಿಜನ್ ಬೆಡ್ ಗಳು ಸಿದ್ಧವಾಗಿವೆ. ಇನ್ನೂ ಹೆಚ್ಚುವರಿಯಾಗಿ 10 ಆಕ್ಸಿಜನ್ ಬೆಡ್ ಗಳು ಸಿದ್ಧವಾಗುತ್ತಿವೆ‌. ತಾಲೂಕಿನ ವಾಮದಪದವು ಆಸ್ಪತ್ರೆಯ 30 ಬೆಡ್ ಗಳಲ್ಲಿ 12 ಬೆಡ್ ಗಳನ್ನು ಕೊರೋನ ಸೋಂಕಿತರಿಗೆ ಮೀಸಲಿಡಲಾಗಿದೆ. ಅದನ್ನು 20ಕ್ಕೆ ಏರಿಕೆ ಮಾಡಿ ಎಲ್ಲಾ ಬೆಡ್ ಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು‌‌ ಎಂದು ಅವರು ಮಾಹಿತಿ ನೀಡಿದರು.  ಬಳಿಕ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮತ್ತು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಮಹೇಶ್ ಶೆಟ್ಟಿ, ಪ್ರದೀಪ್ ಅಜ್ಜಿಬೆಟ್ಟು ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "COVID ಹಿನ್ನೆಲೆ: ಬಂಟ್ವಾಳದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*