ಬಂಟ್ವಾಳ

ಆದ್ಯತೆ ಮೇರೆಗೆ ಲಸಿಕೆ, ಕೋವಿಡ್ ಪ್ರಕರಣಗಳ ಹೆಚ್ಚಳ ಕುರಿತು ಕ್ರಮ: ಉಳಿ ಗ್ರಾಮದಲ್ಲಿ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಲಸಿಕೆ ಹಾಕಲು ಬಾಕಿ ಉಳಿದವರ ಪಟ್ಟಿ ಮಾಡಿ, ಕೊರೊನಾ ಸೋಂಕಿತರ ನಿಗಾಕ್ಕೆ ಇರುವ ಸೌಲಭ್ಯಗಳನ್ನು ಬಳಸಿಕೊಳ್ಳಿ, ಕ್ವಾರಂಟೈನ್ ನವರಿಗೆ ಅವಶ್ಯವಿದ್ದರೆ ಕೋವಿಡ್ ಕೇರ್ ಸೆಂಟರ್ ಬಳಸಿಕೊಳ್ಳಿ ಎಂದು ಉಳಿ ಗ್ರಾಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಬುಧವಾರ ಉಳಿ ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ದೃಢಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು ಎಂದರು. ಆಯಾಯ ಗ್ರಾ.ಪಂ.ವ್ಯಾಪ್ತಿಗಳಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ತಹಶೀಲ್ದಾರ್ ರಶ್ಮಿ ಎಸ್.ಆರ್.ಸೂಚನೆ ನೀಡಿದರು. ವಾರಕ್ಕೊಂದು ಬಾರಿ ಟಾಸ್ಕ್ ಫೋರ್ಸ್ ಸಭೆ ನಡೆಸುವಂತೆ ತಾ.ಪಂ.ಕಾರ್ಯನಿರ್ವಹಣಾಽಕಾರಿ ರಾಜಣ್ಣ ತಿಳಿಸಿದರು. ಉಳಿ ಗ್ರಾ.ಪಂ.ಸದಸ್ಯ ವಸಂತ ಅವರು, ಕ್ವಾರಂಟೈನ್ ವ್ಯವಸ್ಥೆಯನ್ನು ಸಮರ್ಪಕಗೊಳಿಸಲು ಸಲಹೆ ನೀಡಿದರು.

ಸಭೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಫ್ಲೈಯಿಂಗ್ ಸ್ಕಾಡ್ ಅಧಿಕಾರಿ ಚೆನ್ನಕೇಶವಮೂರ್ತಿ, ಉಳಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ, ಅಭಿವೃದ್ಧಿ ಅಧಿಕಾರಿ ಶ್ರೀಧರ, ಗ್ರಾ.ಪಂ.ಸದಸ್ಯರು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ