ಕೊರೊನಾ ಕರ್ಫ್ಯೂ ಮತ್ತಷ್ಟು ಬಿಗಿ – ತುರ್ತು ಸಭೆಯಲ್ಲಿ ನಿರ್ಧಾರ

ಟಫ್ ರೂಲ್ಸ್ ಏನೇನು? ಇಲ್ಲಿದೆ ಪೂರ್ತಿ ವಿವರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಫ್ರ್ಯೂವನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಿಗಿಗೊಳಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಗತ್ಯ ವಸ್ತುಗಳ ಖರೀದಿಗೆ  ಬೆಳಗ್ಗೆ 6 ಗಂಟೆಯಿಂದ ಬೆಳಿಗ್ಗೆ 9 ಗಂಟೆಯವರೆಗೆ ಮಾತ್ರ ಅವಕಾಶ ನೀಡಿ 10 ಗಂಟೆಯೊಳಗೆ ಪ್ರತಿಯೊಬ್ಬರು ಮನೆ ಸೇರಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೊರೋನ ಕರ್ಫ್ಯೂ ಜಾರಿಗೆ ತಂದು 8 ದಿನಗಳಾದರೂ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ, ಸಾರ್ವಜನಿಕರು ಅನಗತ್ಯವಾಗಿ ಸಣ್ಣಪುಟ್ಟ ನೆಪಗಳನ್ನು ಹೇಳಿಕೊಂಡು ನಗರದ ತುಂಬೆಲ್ಲಾ ಅನಾವಶ್ಯಕವಾಗಿ ಓಡಾಡುತ್ತಿರುವುದು, ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದು ಇದಕ್ಕೆ ಕಾರಣವಾಗಿದೆ. ಕರ್ಫ್ಯೂ ಅನುಷ್ಠಾನವನ್ನು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ಕೊರೋನಾ ನಿಯಂತ್ರಣ ಮಾರ್ಗಸೂಚಿಗಳು ಪಾಲನೆಯಾಗುವಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರು ದೈನಂದಿನ ಅಗತ್ಯ ವಸ್ತುಗಳನ್ನು ಅವಶ್ಯವಿದ್ದಲ್ಲಿ ಮಾತ್ರ  ಖರೀದಿಗೆ ಮನೆಯಿಂದ ಹೊರಬರಬೇಕು, ಇಲ್ಲವಾದಲ್ಲಿ ಮನೆಯಲ್ಲೇ ಸುರಕ್ಷಿತವಾಗಿ ಇರಬೇಕು ಎಂದರು. ಶನಿವಾರ ಮತ್ತು ಭಾನುವಾರ ಪೂರ್ಣ ಪ್ರಮಾಣದಲ್ಲಿ ಲಾಕ್‍ಡೌನ್ ಮಾಡಲು ಚಿಂತಿಸಲಾಗಿದೆ. ಕೊರೋನಾ ಪ್ರಕರಣಗಳು ಏರುಗತಿಯಲ್ಲಿ ಕಂಡುಬಂದಲ್ಲಿ ಅನಿವಾರ್ಯ. ಆ ದಿನಗಳಲ್ಲಿ ದಿನಸಿ ಅಂಗಡಿ ತೆರೆಯಲು ಅವಕಾಶವಿರುವುದಿಲ್ಲ ಹಾಪ್ ಕಾಮ್ಸ್, ಹಾಲಿನ ಅಂಗಡಿಗಳು, ತರಕಾರಿ, ಹಣ್ಣುಹಂಪಲು ತಳ್ಳುಗಾಡಿಗಳಿಗೆ ಅವಕಾಶ ನೀಡಲಾಗುವುದು ಎಂದರು.ಕರ್ಫ್ಯೂ ಅವಧಿಯಲ್ಲಿ ವಾಹನಗಳಲ್ಲಿ ಸಂಚರಿಸುವವರನ್ನು ತಡೆದು ವಿಚಾರಿಸಬೇಕು. ನಕಲಿ ಗುರುತಿನ ಚೀಟಿ ತೋರಿಸುವವರು, ಅನಗತ್ಯವಾಗಿ ಸಕಾರಣವಿಲ್ಲದೆ ವಾಹನಗಳಲ್ಲಿ ಓಡಾಡುವುದು ಕಂಡುಬಂದರೆ ಅಂತಹ ವಾಹನಗಳನ್ನು ನಿರ್ಧಾಕ್ಷೀಣ್ಯವಾಗಿ ಸೀಝ್ ಮಾಡಬೇಕು ಎಂದರು.

ಜಾಹೀರಾತು

ಕೋವಿಡ್ ನಿರೋಧಕ ಚುಚ್ಚು ಮದ್ದು ಪಡೆಯಲು ತೆರಳುವವರು, ವೈದ್ಯಕೀಯ ಚಿಕಿತ್ಸೆಗೆ, ಮತ್ತಿತರ ತುರ್ತು ಕೆಲಸ ಇರುವವರು ಕಂಡುಬಂದಲ್ಲಿ ಅವರುಗಳಿಗೆ ಅವಕಾಶ ಮಾಡಿಕೊಡಬೇಕು ಎಂದರು. ಜಿಲ್ಲೆಯಾದ್ಯಂತ ಪೂರ್ವ ನಿಗದಿತವಾಗಿರುವ  ಸಭೆ  ಸಮಾರಂಭಗಳನ್ನು ಮಾಡಲು ಮೇ.15 ರವರೆಗೆ ಮಾತ್ರ ಅವಕಾಶ ನೀಡಬೇಕು, ಹೊಸದಾಗಿ ಯಾವುದೇ ಸಭೆ ಸಮಾರಂಭ ಮಾಡಲು ಅವಕಾಶ ನೀಡಬಾರದು ಎಂದರು.

ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಸಾಮಾಜಿಕ ಒಳಿತಿಗಾಗಿ ಸರ್ಕಾರ ಕೊರೋನ ಕರ್ಫ್ಯೂ ಜಾರಿಗೆ ತಂದಿದೆ ಜನರು ಸಹಕರಿಸಬೇಕು, ಜನರಿಗೆ, ವ್ಯಾಪಾರಸ್ಥರಿಗೆ ಹೆಚ್ಚಿನ ಸಮಸ್ಯೆ ಆಗದಂತೆ ನೋಡಿಕೊಳ್ಳುವುದರೊಂದಿಗೆ ಲಾಕ್‍ಡೌನ್ ಜಾರಿ ಮಾಡಬೇಕು ಎಂದರು.ಸ್ವಿಗ್ಗಿ, ಝೊಮೇಟೋ ಮುಂತಾದ ಆನ್ ಲೈನ್ ಆಹಾರ ಪೂರೈಕೆದಾರರು ರಾತ್ರಿ 10 ಗಂಟೆಯೊಳಗೆ ಕಾರ್ಯನಿರ್ವಹಿಸಿ ನಿಲ್ಲಿಸಬೇಕು. ಅವರು 11 ಗಂಟೆಯೊಳಗೆ ಮನೆ ಸೇರಬೇಕು ಎಂದರು. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮಾತನಾಡಿ, ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲು ನಗರದ ಆಯ್ದ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ಅವರನ್ನು ಪ್ರಶ್ನಿಸಬೇಕು ಎಂದರು. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಲು ಸೆಕ್ಟರ್ ಮ್ಯಾಜಿಸ್ಟ್ರೇಟ್ ಗಳನ್ನು ನೇಮಿಸಲಾಗುವುದು, ಇವರು ತಮಗೆ ನಿಗದಿಪಡಿಸಿದ ವ್ಯಾಪ್ತಿಯೊಳಗೆ ಸಂಚರಿಸಿ ಯಾವುದೇ ಲಾಕ್ ಡೌನ್ ನಿಯಮಗಳು ಉಲ್ಲಂಘನೆಯಾಗದಂತೆ ಹಾಗೂ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು ಎಂದರು.

ನಿರ್ಗತಿಕರಿಗೆ ಸರ್ಕಾರದಿಂದಲೇ ವ್ಯವಸ್ಥೆ: ನಿರ್ಗತಿಕರು ಹಾಗೂ ಕೆಲವು ವಲಸೆ ಕಾರ್ಮಿಕರಿಗೆ ನಗರದ ನಿರಾಶ್ರಿತ ಕೇಂದ್ರಗಳಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಬೇಕು, ಅವರುಗಳ ಆರೋಗ್ಯ ತಪಾಸಣೆಗಳನ್ನು ಸಹ ಮಾಡಿ ಇದರಿಂದ, ಡೆಂಗ್ಯೂ ಮಲೇರಿಯಾದಂತಹ ಸಾಂಕ್ರಮಿಕ ರೋಗಗಳನ್ನು ಹರಡುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.
ಸಭೆಯಲ್ಲಿ ಶಾಸಕರಾದ ಭರತ್. ವೈ ಶೆಟ್ಟಿ, ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ್.ಎ ಕೋಟ್ಯಾನ್, ಯು.ಟಿ ಖಾದರ್, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಉಪ ಮಹಾಪೌರರಾದ ಸುಮಂಗಲಾ ರಾವ್, ನಗರ ಪೋಲಿಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪೋಲಿಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್, ಸಹಾಯಕ ಪೊಲೀಸ್‍ಆಯುಕ್ತ ಪಿ.ಎ ಹೆಗ್ಡೆ,  ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಜಿಲ್ಲಾ ಶಸû್ರ ಚಿಕಿತ್ಸಕರು ಮತ್ತು ಅಧೀಕ್ಷಕರಾದ ಡಾ. ಸದಾಶಿವ ಶ್ಯಾನುಬೋಗ್, ಅಬಕಾರಿ ಇಲಾಖೆಯ ಉಪ ಆಯುಕ್ತರು, ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮೀನುಗಾರಿಕೆ ಇಲಾಖೆಯ ಉಪನಿರ್ದೆಶಕರು. ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊರೊನಾ ಕರ್ಫ್ಯೂ ಮತ್ತಷ್ಟು ಬಿಗಿ – ತುರ್ತು ಸಭೆಯಲ್ಲಿ ನಿರ್ಧಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*