ಬಂಟ್ವಾಳ

ಲಾಕ್ ಡೌನ್ ವಿಷಯದಲ್ಲಿ ರಾಜ್ಯ ಮಾರ್ಗಸೂಚಿ ಅನುಸರಿಸಿ: ರಮಾನಾಥ ರೈ ಸಲಹೆ

ಬಂಟ್ವಾಳ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ರಾಜ್ಯ ಸರಕಾರದ ಮಾರ್ಗಸೂಚಿಯನ್ನು ಜಾರಿ ಮಾಡಬೇಕೆ ಹೊರತು ಪ್ರತ್ಯೇಕ ನಿಯಮಗಳನ್ನು ತಂದು ಜನರನ್ನು ಗೊಂದಲಕ್ಕೆ ದೂಡಬೇಡಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಜಿಲ್ಲಾಡಳಿತಕ್ಕೆ ಸಲಹೆ ಮಾಡಿದ್ದಾರೆ.

ಕೊರೋನಾ ಜನರ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಜನರು ಈಗಾಗಲೇ ಮಾನಸಿಕ ತುಮುಲದಲ್ಲಿ ಇದ್ದಾರೆ. ನಮ್ಮ ಜಿಲ್ಲೆಗೆ ಪ್ರತ್ಯೇಕ ನಿಯಮಗಳನ್ನು ಮಾಡುವುದರಿಂದ ಜನರಿಗೆ ಇನ್ನಷ್ಟು ತೊಂದರೆ ಆಗುತ್ತದೆ. ಖರೀದಿಗೆ ಕಡಿಮೆ ಸಮಯ ನೀಡಿದರೆ ಮಾರ್ಕೆಟ್, ಅಂಗಡಿಗಳಲ್ಲಿ ಜನಜಂಗುಲಿ ಸೇರುವುದು ಒಳ್ಳೆಯದಲ್ಲ ಎಂದು ಮಾಜಿ ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರ ನೀಡಿರುವ ಮಾರ್ಗಸೂಚಿಯನ್ನು ಯಥಾವತ್ ಜಾರಿ ಮಾಡಿ. ಮೀನು ಮಾರಾಟಗಾರರಿಗೆ ಕೋವಿಡ್ ನಿಯಂತ್ರಣ ಸೂತ್ರಗಳನ್ನು ಅನುಸರಿಸಿ ಮಾರಾಟ ಮಾಡಲು ಅವಕಾಶ ನೀಡಿ ಎಂದು ಮಾಜಿ ಸಚಿವ ರಮಾನಾಥ ರೈ ಸೂಚಿಸಿದ್ದಾರೆ. ಕೋವಿಡ್ 19 ವಿರುದ್ಧ ಹೋರಾಡುವಾಗ ಜಿಲ್ಲೆಯ ಮುಖಂಡರು, ತಜ್ಞರು, ಸೇವಾ ಸಂಸ್ಥೆಗಳನ್ನು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟಿತ ಪ್ರಯತ್ನ ಮಾಡಿದಾಗ ಕೊರೋನಾ ಸೋಂಕನ್ನು ಸೋಲಿಸಲು ಸುಲಭ ಆಗಬಹುದು ಎಂದು ಮಾಜಿ ಸಚಿವರು ಜಿಲ್ಲಾಡಳಿತಕ್ಕೆ ಕಿವಿಮಾತು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.