ಪುಂಜಾಲಕಟ್ಟೆ

ಪಿಲಾತಬೆಟ್ಟು ಗ್ರಾಪಂನಲ್ಲಿ 21 ಮಂದಿಗೆ ಕೊರೊನಾ ಸೋಂಕು: ತಡೆಗಟ್ಟಲು ನಿಯಮ ಪಾಲಿಸಿ – ಶಾಸಕ ರಾಜೇಶ್ ನಾಯ್ಕ್

ಪಿಲಾತಬೆಟ್ಟು: 21 ಮಂದಿ ಕೊರೊನಾ ಸೋಂಕಿತರು ಇರುವ ಪಿಲಾತಬೆಟ್ಟು ಗ್ರಾಪಂನ ಟಾಸ್ಕ್ ಫೋರ್ಸ್ ಸಭೆಯನ್ನು ಮಂಗಳವಾರ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಸಲಾಯಿತು. ಕೊರೊನಾ ನಿಯಂತ್ರಣಕ್ಕೆ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕೆ ವಿನಹ: ವ್ಯವಸ್ಥೆ ಗಳ ಬಗ್ಗೆ ವಿನಾಕಾರಣ ಆರೋಪ ಪ್ರತ್ಯಾರೋಪಗಳ ಮೂಲಕ ಸಮಯ ವ್ಯರ್ಥ ಮಾಡಬೇಡಿ ಎಂದು ಈ ಸಂದರ್ಭ ಶಾಸಕರು ಸಲಹೆ ನೀಡಿದರು.

21 ಮಂದಿ ಕೊರೊನಾ ಸೊಂಕಿತರು ಇದ್ದು ಅದರಲ್ಲಿ ಓರ್ವ ವ್ಯಕ್ತಿಯ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಉಳಿದಂತೆ 20 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಪಿಡಿಒ ರಾಜಶೇಖರ ರೈ ನೀಡಿದರು.

ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿಪುಪ್ಷಾನಂದ, ಉಪಾಧ್ಯಕ್ಷ ಲಕ್ಮೀನಾರಾಯಣ ಹೆಗ್ಡೆ, ತಹಶಿಲ್ದಾರ್ ರಶ್ಮಿ ಎಸ್ ಆರ್, ತಾ.ಪಂ‌.ಇ.ಒ.ರಾಜಣ್ಣ, ಪಿ.ಡಿ.ಒ.ರಾಜಶೇಖರ್ ರೈ, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ.ಸೋಹನ್ ಕುಮಾರ್ ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ