ಬಂಟ್ವಾಳ

ವಲಸೆ ಕಾರ್ಮಿಕರನ್ನು ಉಳಿಸಲು ಪಾಲನಾ ಕೇಂದ್ರ ಮಾಡಿರಿ: ಬಂಟ್ವಾಳದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯ

ಬಂಟ್ವಾಳ: ವಲಸೆ ಕಾರ್ಮಿಕರನ್ನು ಉಳಿಸಲು ಪ್ರತಿಯೊಂದು ಪಂಚಾಯಿತಿಯಲ್ಲಿ ಪಾಲನಾ ಕೇಂದ್ರವನ್ನು ಮಾಡಬೇಕು, ಬಡವರಿಗೆ ದಿನಬಳಕೆಯ ಪ್ಯಾಕೇಜ್ ಕೊಟ್ಟು ಬಡವರನ್ನು ರಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ಸರ್ಕಾರ ಘೋಷಿಸಿರುವ ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರು ಸಂಕಷ್ಟಕ್ಕೊಳಗಾಗಿದ್ದು, ದಿನನಿತ್ಯದ ದುಡಿಮೆ ಇಲ್ಲದ ಕಾರಣ ತೊಂದರೆಗೊಳಗಾಗಿದ್ದಾರೆ ಎಂದು ಬಂಟ್ವಾಳದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ನಿಯಂತ್ರಣ ಉದ್ದೇಶದಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಇದು ಕಠಿಣವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಮಲೆನಾಡು ಪ್ರದೇಶಗಳಲ್ಲಿ ಮನೆಗಳು ದೂರವಿದ್ದು, ಜನರಿಗೆ ಓಡಾಟ ಮಾಡಲು ಅವಕಾಶ ಮಾಡಲಾಗಿದೆ. ರೇಷನ್ ಪಡೆದುಕೊಳ್ಳಲು ಬಡವರಿಗೆ ಕಷ್ಟವಾಗುತ್ತಿದೆ. ದಿನಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರು, ಆಟೊ ಚಾಲಕರಿಗೆ ದಿನಬಳಕೆ ವಸ್ತುಗಳನ್ನು ಪಡೆಯಲು ಕಷ್ಟವಾಗುತ್ತಿದೆ. ಆದ್ದರಿಂದ ಪ್ಯಾಕೇಜ್ ಘೋಷಣೆ ಒದಗಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಲಾಕ್ ಡೌನ್ ಘೋಷಣೆ ಮಾಡಿ ಕಠಿಣವಾಗಿದೆ, ಪಾಲನೆ ಮಾಡಿ ಎಂದು ಹೇಳುವುದು ಸುಲಭ, ಬಡವರಿಗೆ ಅನುಕೂಲವಾಗುವಂತೆ ದಿನಬಳಕೆಗೆ ಬೇಕಾಗುವಂಥ ಕಿಟ್ ಒದಗಿಸಿ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.