ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ 34 ಮಂದಿಗೆ ಕೊರೊನಾ ಸೋಂಕು ಬಾಧಿಸಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದರು.
ಶಾಸಕರ ನೇತೃತ್ವದಲ್ಲಿ ಕಾವಳಪಡೂರು ಗ್ರಾ.ಪಂ.ನ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ನಡೆಯಿತು. ವಗ್ಗದಲ್ಲಿ ಕೋವಿಡ್ ಕೇರ್ ಸೆಂಟರ್ ನ ವ್ಯವಸ್ಥೆ ಮಾಡಲಾಗಿದ್ದು , ಅದರ ಉತ್ತಮ ನಿರ್ವಹಣೆ ಗೆ ಟಾಸ್ಕ್ ಫೋರ್ಸ್ ಕೆಲಸ ಮಾಡಲು ಸೂಚಿಸಿದರು. ಟಾಸ್ಕ್ ಫೋರ್ಸ್ ಸಭೆಯಲ್ಲಿ ಸರಿಯಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾವಳಪಡೂರು ಗ್ರಾ.ಪಂಚಾಯತ್ ಅಧ್ಯಕ್ಷೆ ರಜನಿ, ಉಪಾಧ್ಯಕ್ಷೆ ಲಕ್ಷ್ಮೀ, ತಾ.ಪಂ.ಇಒ.ರಾಜಣ್ಣ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪಿಡಿಒ ಶ್ರೀಧರ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು , ವಿಎ ಆಶಾ ಮೆಹಂದಲೆ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಾವಳಪಡೂರು ಗ್ರಾಮದಲ್ಲಿ ಕೊರೊನಾ ಕಾರ್ಯಪಡೆ ಮೀಟಿಂಗ್: ಸೂಕ್ತ ಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಸೂಚನೆ"
Be the first to comment on "ಕಾವಳಪಡೂರು ಗ್ರಾಮದಲ್ಲಿ ಕೊರೊನಾ ಕಾರ್ಯಪಡೆ ಮೀಟಿಂಗ್: ಸೂಕ್ತ ಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಸೂಚನೆ"