ಬಂಟ್ವಾಳ

ಬಂಟ್ವಾಳದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ಆಂಬುಲೆನ್ಸ್ ಸೇವೆ

ಬಂಟ್ವಾಳ: ಹಿಂದು ಜಾಗರಣ ವೇದಿಕೆ  ಆ್ಯಂಬುಲೆನ್ಸ್ ಸೇವೆ ಬಂಟ್ವಾಳದಲ್ಲಿ ಗುರುವಾರ ಲೋಕಾರ್ಪಣೆ ಗೊಂಡಿತು. ಪುತ್ತೂರು ಜಿಲ್ಲೆ ವ್ಯಾಪ್ತಿಯಲ್ಲಿ ಎರಡನೇ ಆ್ಯಂಬುಲೆನ್ಸ್ ಸೇವೆ ಇದಾಗಿದ್ದು, ಮೊದಲನೆಯದ್ದು, ಈಗಾಗಲೇ ಪುತ್ತೂರಿನಲ್ಲಿ ಸೇವೆಯಲ್ಲಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಿ.ಸಿ.ರೋಡಿನ ಸೇವಾಭಾರತಿ ಕಚೇರಿಯ ಬಳಿ ಲೋಕಾರ್ಪಣೆಗೊಳಿಸಿದರು.

ಆರ್.ಎಸ್.ಎಸ್. ಮುಂದಾಳುಗಳಾದ ದಿ.ವೆಂಕಟರಮಣ ಹೊಳ್ಳ ಹಾಗೂ ದಿ.ಶರತ್ ಮಡಿವಾಳ ಅವರ ಸ್ಮರಣಾರ್ಥ ಈ ಆಂಬುಲೆನ್ಸ್ ಒದಗಿಸಲಾಗುತ್ತಿದೆ. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಆರ್.ಎಸ್.ಎಸ್.ಜಿಲ್ಲಾ ಕಾರ್ಯವಾಹ ವಿನೋದ್ ಕೊಡ್ಮಾಣ್, ಹಿಂಜಾವೇ ಪ್ರಮುಖರಾದ ಜಗದೀಶ್ ನೆತ್ತರಕೆರೆ, ರವಿರಾಜ್ ಬಿ.ಸಿ.ರೋಡು, ರತ್ನಾಕರ ಶೆಟ್ಟಿ, ನರಸಿಂಹ ಮಾಣಿ, ಪ್ರಶಾಂತ್ ಕೆಂಪುಗುಡ್ಡೆ, ಚಂದ್ರ ಕಲಾಯಿ, ಬಾಲಕೃಷ್ಣ ಕಲಾಯಿ, ತಿರುಲೇಶ್ ಬೆಳ್ಳೂರು, ಯೋಗೀಶ್ ಕುಮ್ಡೇಲು, ಶಶಿ ಕಮಾಜೆ, ಶಿವಪ್ರಸಾದ್ ಧನುಪೂಜೆ, ಸುರೇಶ ಬೆಂಜನಪದವು, ಜಗದೀಶ್ ಕಾಮಾಜೆ, ಹರೀಶ್ ಬಾಂಬಿಲ, ರವಿ ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ