ಸರ್ಕಾರಿ ಕಚೇರಿ

ಬೆಳಗ್ಗೆ 7ರಿಂದಲೇ ಪಡಿತರ ವಿತರಣೆ, ನಿಯಮ ಪಾಲನೆ ಕಡ್ಡಾಯ – ಯಾವುದೆಲ್ಲಾ ಮಸ್ಟ್?

ಪಡಿತರ ವಿತರಣೆಗೆ ಕೆಲವು ಸೂಚನೆಗಳನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ನೀಡಿದೆ.

ನ್ಯಾಯಬೆಲೆ ಅಂಗಡಿದಾರರು ಬೆಳಗ್ಗೆ ಏಳು ಗಂಟೆಗೆ ಮುಂಚಿತವಾಗಿ ಬಂದು ಕಡ್ಡಾಯವಾಗಿ ಏಳು ಗಂಟೆಗೆ ಪಡಿತರ ವಿತರಣೆ ಪಾರಂಬಿಸುವುದು. ಪಡಿತರ ಚೀಟಿದಾರರು ದಟ್ಟಣೆಯಾದಲ್ಲಿ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಯಾ ಟೋಕನ್ ಗಳನ್ನು ನೀಡಿ ಪಡಿತರ ವಿತರಿಸುವುದು. 10 ಗಂಟೆಯ ನಂತರವೂ ಕ್ಯೂನಲ್ಲಿದ್ದ ಪಡಿತರ ಚೀಟಿದಾರರನ್ನು ಹಿಂದಕ್ಕೆ ಕಳುಹಿಸದೆ ಕಡ್ಡಾಯವಾಗಿ ಪಡಿತರ ವಿತರಿಸುವುದು.ಪಡಿತರ ವಿತರಣಾ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.  ಅಂತೆಯೇ ಸಾನಿಟೈಸರ್ ಹಾಗೂ ನೀರಿನ ವ್ಯವಸ್ಥೆಯನ್ನು ಮಾಡಿಕೊಳ್ಳುವುದು. ಆದಾರ್ ಓಟಿಪಿ ಸೌಲಭ್ಯವನ್ನು ಒದಗಿಸಿರುವುದರಿಂದ ಯಾವುದೇ ಗೊಂದಲಕ್ಕೆ ಒಳಗಾಗದೆ ಪಡಿತರ ವಿತರಿಸುವುದು ಮತ್ತು  ಪಡಿತರ ಚೀಟಿದಾರರನ್ನು ಬಯೋಮೆಟ್ರಿಕ್  ಕೊಡಲು  ಒತ್ತಾಯಿಸಬಾರದು. ನ್ಯಾಯಬೆಲೆ ಅಂಗಡಿಗಳಲ್ಲಿ 2021ನೇ ಮೇ ಮಾಹೆಯ ವಿತರಣಾ ಪ್ರಮಾಣದ ಫಲಕವನ್ನು ಅಳವಡಿಸುವುದು, ಮಾತ್ರವಲ್ಲದೆ ಪಡಿತರ ಚೀಟಿಗಳಿಗೆ ನಿಗದಿಪಡಿಸಲಾದ ಪ್ರಮಾಣದಲ್ಲಿ ಪಡಿತರ ವಿತರಣೆಯನ್ನು ಕೈಗೊಳ್ಳುವುದು. ಯಾವುದೇ ಕಾರಣಕ್ಕೂ ಕಡಿಮೆ ಪ್ರಮಾಣದಲ್ಲಿ ಪಡಿತರವನ್ನು ವಿತರಿಸತಕ್ಕದಲ್ಲ. ಪಡಿತರದಲ್ಲಿ ಬೆಳ್ತಿಗೆ ಹಾಗೂ ಕುಚ್ಚಿಲಕ್ಕಿಯನ್ನು ಸಮ ಪ್ರಮಾಣದಲ್ಲಿ ವಿತರಿಸುವುದು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಪಡಿತರವನ್ನು ವಿತರಿಸುವುದು. ಯಾವುದೇ ಕಾರಣಕ್ಕೂ ಕಾನೂನು  ಬಾಹಿರವಾಗಿ  ಹಣ ಪಡೆಯಬಾರದು. ನ್ಯಾಯಬೆಲೆ ಅಂಗಡಿದಾರರು ಪಡಿತರ ಚೀಟಿದಾರರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಜನ ದಟ್ಟಣೆಯಾಗದಂತೆ ಹಾಗೂ ಸುವ್ಯವಸ್ಥೆ ಕಾಪಾಡಲು ಈಗಾಗಲೇ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ. ಯಾವುದೇ ರೀತಿಯಲ್ಲೂ ಪಡಿತರ ವಿತರಣೆಯಲ್ಲಿ ಲೋಪವಾಗದಂತೆ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಿಕೊಂಡು ಸಮಸ್ಯೆಗಳಿಗೆ ಆಸ್ಪದ  ನೀಡದೆ  ಪಡಿತರ  ವಿತರಣೆಯನ್ನು  ಮಾಡತಕ್ಕದ್ದು.ಹೊರ ಜಿಲ್ಲೆಯ ಪಡಿತರ ಚೀಟಿದಾರರು ದಾಸ್ತಾನು ಇರುವ ಸಮೀಪದ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯತಕ್ಕದ್ದು. ಪಡಿತರ  ಪಡೆಯಲು ಮಾಹಿತಿಗಾಗಿ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಿರಿ

ತಾಲೂಕು ಸಹಾಯವಾಣಿ ಸಿಬ್ಬಂದಿಗಳು ಮೊಬೈಲ್ ನಂಬ್ರಮಂಗಳೂರು ಅ.ಪ.ಪ್ರದೇಶ 0824 – 2423622 ರೇಖಾ, ಆಹಾರ ನಿರೀಕ್ಷಕರು 9110452676, ಮಂಗಳೂರು ತಾಲೂಕು 0824 – 2412033, ರಾಜ್ಯಶ್ರೀ ಅಡ್ಯಂತಾಯ, ಆಹಾರ ನಿರೀಕ್ಷಕರು 9482502247, ಬಂಟ್ವಾಳ ತಾಲೂಕು 08255 – 232125 ಶ್ರೀಮತಿ ಶೋಭಾ, ಆಹಾರ ನಿರೀಕ್ಷಕರು 9480250251, ಪುತ್ತೂರು ತಾಲೂಕು 08251 – 231349, ಸರಸ್ವತಿ.ಕೆ, ಆಹಾರ ನಿರೀಕ್ಷಕರು 9449389715, ಬೆಳ್ತಂಗಡಿ ತಾಲೂಕು 08256 – 232383, ವಿಶ್ವ.ಕೆ, ಆಹಾರ ನಿರೀಕ್ಷಕರು 8762698174, ಸುಳ್ಯ ತಾಲೂಕು 08257 – 231330, ವಸಂತಿ, ಆಹಾರ ನಿರೀಕ್ಷಕರು 9845466149 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ