ಪಡಿತರ ವ್ಯವಸ್ಥೆಯನ್ನು ತಕ್ಷಣ ರಾಜ್ಯ ಸರ್ಕಾರ ಸರಿಪಡಿಸಲಿ – ಯು.ಟಿ.ಖಾದರ್

ರೇಷನ್ ಸಮಸ್ಯೆ ನಿವಾರಿಸಿ, ಸಂಕಷ್ಟದ ಸ್ಥಿತಿಯಲ್ಲಿ ಯಾರೂ ಹಸಿವಿನಿಂದ ಇರದಂತೆ ನೋಡಿಕೊಳ್ಳಿ – ಸರ್ಕಾರಕ್ಕೆ ಸಲಹೆ

ಬಂಟ್ವಾಳ: ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ಕೊಡದ ರಾಜ್ಯ ಸರಕಾರವು ಇರುವ ಪಡಿತರ ಚೀಟಿಗಳನ್ನೇ ರದ್ದು ಮಾಡುತ್ತಿದೆ. ಹೀಗಾಗಿ ಪಡಿತರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಇದನ್ನು ಸರಿಪಡಿಸಿ ಎಂದು ಶಾಸಕ ಯು.ಟಿ.ಖಾದರ್ ಎಂದು ಒತ್ತಾಯಿಸಿದ್ದಾರೆ.

ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಾವು ಮಾಡಿದ ವ್ಯವಸ್ಥೆಯನ್ನು ಮುಂದುವರಿಸುವ ಆಸಕ್ತಿ ಪ್ರಸ್ತುತ ಸರಕಾರಕ್ಕೆ ಇಲ್ಲವಾಗಿದೆ. ಸರಕಾರಕ್ಕೆ ರೇಶನ್ ಕಾರ್ಡ್ ಕಟ್ ಮಾಡುವ ಆಸಕ್ತಿ ಕಾರ್ಡ್ ವಿತರಣೆಗೆ ಇಲ್ಲವಾಗಿದೆ. ಈ ಎರಡು ತಿಂಗಳಲ್ಲಿ ಎಪಿಎಲ್-ಬಿಪಿಎಲ್ ಎಂದು ನೋಡದೆ ಯಾರು ನ್ಯಾಯ ಬೆಲೆ ಅಂಗಡಿಯ ಮುಂದೆ ನಿಲ್ಲುತ್ತಾನೋ ಅವರಿಗೆ ಅಕ್ಕಿ ಕೊಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದರು.ರಾಜ್ಯ ಸರಕಾರವು ಕೋವಿಡ್ ಸಂದರ್ಭ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಅದರಲ್ಲಿ ಕರಾವಳಿಯ ಆಧಾರ ಸ್ತಂಭ ಮೀನುಗಾರರನ್ನು ಕಡೆಗಣಿಸಿರುವುದು ಖಂಡಿನೀಯ ಎಂದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರ ವೇತನ ಬಾರದೇ ಇದ್ದು, ಇದನ್ನು ಸರಕಾರದ ಗಮನಕ್ಕೆ ತರಲಾಗಿದೆ. ಜತೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುರುವ ಇ-ಸರ್ವೇಯ ಜವಾಬ್ದಾರಿಯನ್ನು ಮುಂದಕ್ಕೆ ಹಾಕಲು ಆಗ್ರಹಿಸಲಾಗಿದೆ ಎಂದರು. ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪತಿ ಆಸ್ಪತ್ರೆಯಲ್ಲಿ ೫೦ ಬೆಡ್, ಯೆನಪೋಯ ಸಂಸ್ಥೆಯ ಅಪಾರ್ಟ್ಮೆಂಟ್‌ನಲ್ಲಿ ೭೦ ಬೆಡ್ ಹಾಗೂ ಯುನಿವರ್ಸಿಟಿಯ ಹಾಸ್ಟೆಲ್‌ನಲ್ಲಿ 100 ಬೆಡ್‌ಗಳ ವಿಶ್ರಾಂತಿ ಕೇಂದ್ರಗಳನ್ನು ಮಾಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಡಿತರ ವ್ಯವಸ್ಥೆಯನ್ನು ತಕ್ಷಣ ರಾಜ್ಯ ಸರ್ಕಾರ ಸರಿಪಡಿಸಲಿ – ಯು.ಟಿ.ಖಾದರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*