ಫರಂಗಿಪೇಟೆ

ಪಡಿತರ ವ್ಯವಸ್ಥೆಯನ್ನು ತಕ್ಷಣ ರಾಜ್ಯ ಸರ್ಕಾರ ಸರಿಪಡಿಸಲಿ – ಯು.ಟಿ.ಖಾದರ್

ರೇಷನ್ ಸಮಸ್ಯೆ ನಿವಾರಿಸಿ, ಸಂಕಷ್ಟದ ಸ್ಥಿತಿಯಲ್ಲಿ ಯಾರೂ ಹಸಿವಿನಿಂದ ಇರದಂತೆ ನೋಡಿಕೊಳ್ಳಿ – ಸರ್ಕಾರಕ್ಕೆ ಸಲಹೆ

ಬಂಟ್ವಾಳ: ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ಕೊಡದ ರಾಜ್ಯ ಸರಕಾರವು ಇರುವ ಪಡಿತರ ಚೀಟಿಗಳನ್ನೇ ರದ್ದು ಮಾಡುತ್ತಿದೆ. ಹೀಗಾಗಿ ಪಡಿತರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಇದನ್ನು ಸರಿಪಡಿಸಿ ಎಂದು ಶಾಸಕ ಯು.ಟಿ.ಖಾದರ್ ಎಂದು ಒತ್ತಾಯಿಸಿದ್ದಾರೆ.

ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಾವು ಮಾಡಿದ ವ್ಯವಸ್ಥೆಯನ್ನು ಮುಂದುವರಿಸುವ ಆಸಕ್ತಿ ಪ್ರಸ್ತುತ ಸರಕಾರಕ್ಕೆ ಇಲ್ಲವಾಗಿದೆ. ಸರಕಾರಕ್ಕೆ ರೇಶನ್ ಕಾರ್ಡ್ ಕಟ್ ಮಾಡುವ ಆಸಕ್ತಿ ಕಾರ್ಡ್ ವಿತರಣೆಗೆ ಇಲ್ಲವಾಗಿದೆ. ಈ ಎರಡು ತಿಂಗಳಲ್ಲಿ ಎಪಿಎಲ್-ಬಿಪಿಎಲ್ ಎಂದು ನೋಡದೆ ಯಾರು ನ್ಯಾಯ ಬೆಲೆ ಅಂಗಡಿಯ ಮುಂದೆ ನಿಲ್ಲುತ್ತಾನೋ ಅವರಿಗೆ ಅಕ್ಕಿ ಕೊಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದರು.ರಾಜ್ಯ ಸರಕಾರವು ಕೋವಿಡ್ ಸಂದರ್ಭ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಅದರಲ್ಲಿ ಕರಾವಳಿಯ ಆಧಾರ ಸ್ತಂಭ ಮೀನುಗಾರರನ್ನು ಕಡೆಗಣಿಸಿರುವುದು ಖಂಡಿನೀಯ ಎಂದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರ ವೇತನ ಬಾರದೇ ಇದ್ದು, ಇದನ್ನು ಸರಕಾರದ ಗಮನಕ್ಕೆ ತರಲಾಗಿದೆ. ಜತೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುರುವ ಇ-ಸರ್ವೇಯ ಜವಾಬ್ದಾರಿಯನ್ನು ಮುಂದಕ್ಕೆ ಹಾಕಲು ಆಗ್ರಹಿಸಲಾಗಿದೆ ಎಂದರು. ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪತಿ ಆಸ್ಪತ್ರೆಯಲ್ಲಿ ೫೦ ಬೆಡ್, ಯೆನಪೋಯ ಸಂಸ್ಥೆಯ ಅಪಾರ್ಟ್ಮೆಂಟ್‌ನಲ್ಲಿ ೭೦ ಬೆಡ್ ಹಾಗೂ ಯುನಿವರ್ಸಿಟಿಯ ಹಾಸ್ಟೆಲ್‌ನಲ್ಲಿ 100 ಬೆಡ್‌ಗಳ ವಿಶ್ರಾಂತಿ ಕೇಂದ್ರಗಳನ್ನು ಮಾಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.