ವಿಟ್ಲಪಡ್ನೂರು: ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ

16 ಸಕ್ರಿಯ ಪ್ರಕರಣಗಳು – ನಿಗಾ ವಹಿಸುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ತಾಲೂಕಿನ ವಿಟ್ಲಪಡ್ನೂರಿನಲ್ಲಿ ಕಾರ್ಯಪಡೆ ಸಭೆಯನ್ನು ಶುಕ್ರವಾರ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಹೊರರಾಜ್ಯದಿಂದ ಬಂದವರ ಕುರಿತು ನಿಗಾ ವಹಿಸಿ, ಕ್ವಾರಂಟೈನ್ ಗೆ ಒಳಪಡಿಸುವಂತೆ ಸೂಚಿಸಿದರು.

ಕೊರೊನಾ ಕುರಿತು ಜನಜಾಗೃತಿ ಮೂಡಿಸಬೇಕು, ಲಸಿಕೆ ವಿಚಾರದಲ್ಲಿ ಕಾರ್ಯಪಡೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಈ ಸಂದರ್ಭ ಅವರು ಹೇಳಿದರು. ಈ ಗ್ರಾಮದಲ್ಲಿ ಶುಕ್ರವಾರ 16 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 12 ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಹಾಯಕಿ ಮಾಹಿತಿ ನೀಡಿದರು.

ಜಾಹೀರಾತು

ತಹಶೀಲ್ದಾರ್ ರಶ್ಮಿ ಎಸ್. ಆರ್.  ಮಾತನಾಡಿ, ಲಸಿಕೆ ಪಡೆಯದೇ ಇರುವವರು ನೋಂದಣಿ ಮಾಡಿಕೊಂಡ ಬಳಿಕವಷ್ಟೇ ಪ್ರಥಮ ಲಸಿಕೆ ನೀಡಲಾಗುತ್ತದೆ, ಈ ಕುರಿತಾಗಿ ಹೆಚ್ಚಿನ ಪ್ರಚಾರ ಅಗತ್ಯ ಎಂದು ತಿಳಿಸಿದರು.

ತಾ.ಪಂ.ಕಾರ್ಯನಿರ್ವಹಣಾಧಿಕಾರಿ‌ ರಾಜಣ್ಣ ಮಾತನಾಡಿ,  ವಾರಕ್ಕೆ ಒಂದು ಸಭೆ ನಡೆಸಬೇಕು, ಪಂಚಾಯಿತಿ.ಮಟ್ಟದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೇಸರ್, ಕೊಡೆಯಂಥ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪಂಚಾಯತ್ ಅನುದಾನ ಬಳಸುವಂತೆ ಸೂಚಿಸಿದರು. ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಕುಮಾರ್, ಪಿ.ಡಿ.ಒ.ಸುಜಯ, ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣಿಕ ವೈಶಾಲಿ ,ಶಾಸಕರ ವಾರ್ ರೂಂ ಪ್ರಮುಖರಾದ ದೇವದಾಸ ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲಪಡ್ನೂರು: ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*