ವಿಟ್ಲ

ವಿಟ್ಲಪಡ್ನೂರು: ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ

16 ಸಕ್ರಿಯ ಪ್ರಕರಣಗಳು – ನಿಗಾ ವಹಿಸುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ತಾಲೂಕಿನ ವಿಟ್ಲಪಡ್ನೂರಿನಲ್ಲಿ ಕಾರ್ಯಪಡೆ ಸಭೆಯನ್ನು ಶುಕ್ರವಾರ ನಡೆಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಹೊರರಾಜ್ಯದಿಂದ ಬಂದವರ ಕುರಿತು ನಿಗಾ ವಹಿಸಿ, ಕ್ವಾರಂಟೈನ್ ಗೆ ಒಳಪಡಿಸುವಂತೆ ಸೂಚಿಸಿದರು.

ಕೊರೊನಾ ಕುರಿತು ಜನಜಾಗೃತಿ ಮೂಡಿಸಬೇಕು, ಲಸಿಕೆ ವಿಚಾರದಲ್ಲಿ ಕಾರ್ಯಪಡೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಈ ಸಂದರ್ಭ ಅವರು ಹೇಳಿದರು. ಈ ಗ್ರಾಮದಲ್ಲಿ ಶುಕ್ರವಾರ 16 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 12 ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಹಾಯಕಿ ಮಾಹಿತಿ ನೀಡಿದರು.

ಜಾಹೀರಾತು

ತಹಶೀಲ್ದಾರ್ ರಶ್ಮಿ ಎಸ್. ಆರ್.  ಮಾತನಾಡಿ, ಲಸಿಕೆ ಪಡೆಯದೇ ಇರುವವರು ನೋಂದಣಿ ಮಾಡಿಕೊಂಡ ಬಳಿಕವಷ್ಟೇ ಪ್ರಥಮ ಲಸಿಕೆ ನೀಡಲಾಗುತ್ತದೆ, ಈ ಕುರಿತಾಗಿ ಹೆಚ್ಚಿನ ಪ್ರಚಾರ ಅಗತ್ಯ ಎಂದು ತಿಳಿಸಿದರು.

ತಾ.ಪಂ.ಕಾರ್ಯನಿರ್ವಹಣಾಧಿಕಾರಿ‌ ರಾಜಣ್ಣ ಮಾತನಾಡಿ,  ವಾರಕ್ಕೆ ಒಂದು ಸಭೆ ನಡೆಸಬೇಕು, ಪಂಚಾಯಿತಿ.ಮಟ್ಟದ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೇಸರ್, ಕೊಡೆಯಂಥ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪಂಚಾಯತ್ ಅನುದಾನ ಬಳಸುವಂತೆ ಸೂಚಿಸಿದರು. ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಕುಮಾರ್, ಪಿ.ಡಿ.ಒ.ಸುಜಯ, ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣಿಕ ವೈಶಾಲಿ ,ಶಾಸಕರ ವಾರ್ ರೂಂ ಪ್ರಮುಖರಾದ ದೇವದಾಸ ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts