ಕೋವಿಡ್ ಕರ್ಫ್ಯೂ ಸಂದರ್ಭ ಎಲ್ಲರೂ ಮನೆಯೊಳಗಿದ್ದಾಗ ಪರಿಸರ ಶುಚಿಯಾಗಿಸುವ ಪೌರಕಾರ್ಮಿಕರಿಂದ ಕೊರೊನಾ ಜಾಗೃತಿ

ಬಂಟ್ವಾಳನ್ಯೂಸ್ ಕಾಳಜಿ

ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಎನ್ನುತ್ತಲೇ, ಕೊರೊನಾ ಆತಂಕದ ಮಧ್ಯೆಯೂ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೌರಕಾರ್ಮಿಕರು ನಗರ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಆತಂಕದಲ್ಲಿಯೇ ನಿತ್ಯಕಾಯಕವನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ಕೊರೊನಾ ಕುರಿತ ಜನಜಾಗೃತಿಯ ಸಂದೇಶವನ್ನೂ ನೀಡುತ್ತಿದ್ದಾರೆ.

ಪುರಸಭೆಯಲ್ಲಿ 12 ಸಾವಿರಕ್ಕೂ ಮಿಕ್ಕಿ ಮನೆ, ವಾಣಿಜ್ಯ ಕಟ್ಟಡಗಳಿದ್ದು, ಹೆಚ್ಚಿನ ಮನೆಗಳ ತ್ಯಾಜ್ಯಗಳು ವಿಲೇವಾರಿ ವಾಹನಗಳಲ್ಲಿ ಸಾಗುತ್ತವೆ. ಮನೆಯವರು ಮಾಡಬೇಕಾದದ್ದು ಇಷ್ಟೇ.. ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ಇಡುವುದು. ಕೆಲವರು ಅದನ್ನೂ ಮಾಡುತ್ತಿಲ್ಲ. ಯಾರೂ ಮನೆಯಿಂದ ಹೊರಬರಬಾರದು ಎಂಬ ಕಟ್ಟಪ್ಪಣೆ ಇರುವಾಗ ಮನೆಯಿಂದ ಹೊರಬಂದು ರಿಸ್ಕ್ ವಹಿಸಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸರಿಯಾದ ವಿಧಾನದಲ್ಲಿ ಕಸವನ್ನು ನೀಡುವುದು ನಮ್ಮ ಕರ್ತವ್ಯವೂ ಹೌದು.

ಜಾಹೀರಾತು

ಪೌರಕಾರ್ಮಿಕರಲ್ಲಿ ಹಲವರಿಗೆ ಕೊರೊನಾ ಪಾಸಿಟಿವ್ ಕೂಡ ಬಂದಿದೆ. ಸದ್ಯ ನಾಲ್ವರು ಕೋವಿಡ್ ನಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಆತಂಕದ ನಡುವೆಯೂ ಪೌರಕಾರ್ಮಿಕರು ತಮ್ಮ ಕೆಲಸಕ್ಕೆ ವಿರಾಮ ಹಾಕಿಲ್ಲ. ಸೋಂಕಿತರ ಮನೆಯನ್ನು ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದ್ದು, ಇವುಗಳ ತ್ಯಾಜ್ಯ ಸಂಗ್ರಹಕ್ಕೆ ಪ್ರತ್ಯೇಕ ವಾಹನವಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ದುಡಿಯುವ ಪೌರಕಾರ್ಮಿಕರ ಕೆಲಸ ಕಠಿಣ.  ಕಳೆದ ವರ್ಷ ಕೊರೊನಾ ಸಂದರ್ಭ ಕಿಟ್ ಮತ್ತಿತರ ನೆರವನ್ನು ನೀಡಲಾಗಿತ್ತು. ಎಲ್ಲರನ್ನೂ ಮನೆಯೊಳಗಿರಿ ಎಂಬ ಸಂದೇಶವನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡುವವರ ಸುರಕ್ಷತೆಯ ಕುರಿತ ಕಾಳಜಿ  ಪ್ರತಿಯೊಬ್ಬರ ಜವಾಬ್ದಾರಿಯೂ ಹೌದು.

ಹರೀಶ ಮಾಂಬಾಡಿ, www.bantwalnews.com

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ಕೋವಿಡ್ ಕರ್ಫ್ಯೂ ಸಂದರ್ಭ ಎಲ್ಲರೂ ಮನೆಯೊಳಗಿದ್ದಾಗ ಪರಿಸರ ಶುಚಿಯಾಗಿಸುವ ಪೌರಕಾರ್ಮಿಕರಿಂದ ಕೊರೊನಾ ಜಾಗೃತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*