ಬಂಟ್ವಾಳ

ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ

ಕೊರೊನಾ ಸಲಿಕೆಯನ್ನು ಪಲ್ಸ್ ಪೊಲೀಯೋ ಲಸಿಕೆ ನೀಡಿದಂತೆ ವಿವಿಧ ಕೇಂದ್ರಗಳಲ್ಲಿ ಒದಗಿಸಿ, ಹಿರಿಯ ನಾಗರಿಕರಿಗೆ ಸಹಕಾರಿಯಾಗುವಂತೆ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಶೇಷಪ್ಪ ಮಾಸ್ಟರ್, ಸದಸ್ಯ ದೊಂಬಯ್ಯ ಕುಲಾಲ್, ಯುವವೇದಿಕೆ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಸಂಚಾಲಕ ಕಾರ್ತಿಕ್ ಮಯ್ಯರಬೈಲ್,ಪುನೀತ್ ಭಂಡಾರಿಬೆಟ್ಟು ವಿನೀಶ್ ಕಾಮಾಜೆ ಜೊತೆಗಿದ್ದರು

ಲಸಿಕೆಯು ಪ್ರಾಥಮಿಕ ಮತ್ತು ಸಮುದಾಯ ಅರೋಗ್ಯ ಕೇಂದ್ರದಲ್ಲಿ ವಿತರಿಸುತ್ತಿದ್ದು, ಜನರಿಗೆ ವಾಹನವಿಲ್ಲದೆ ಹೋಗಿ ಬರಲು ಕಷ್ಟವಾಗುತ್ತಿದ್ದು, ಪಲ್ಸ್ ಪೋಲಿಯೊ ಲಸಿಕೆ ನೀಡಿದಂತೆ ಪಂಚಾಯತು, ಶಾಲೆ, ಅಂಗನವಾಡಿಗಳಲ್ಲಿ ದಿನಾಂಕಗಳನ್ನು ನಿಗದಿಪಡಿಸಿ, ಪ್ರಥಮವಾಗಿ ಹಿರಿಯ ನಾಗರಿಕರಿಗೆ ನಂತರ 45 ವರ್ಷ ಮೇಲ್ಪಟ್ಟವರಿಗೆ ಕೊನೆಗೆ ಇತರರಿಗೆ ವಿತರಿಸುವರೇ ಕ್ರಮಕೈಗೊಳ್ಳಬೇಕಾಗಿ ವಿನಂತಿಸಲಾಗಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.