ಬಂಟ್ವಾಳ: ಕೊರೊನಾಕ್ಕೆ ಸಂಬಂಧಿಸಿ ಶವಗಳನ್ನು ಆಯಾ ಧರ್ಮದ ಪದ್ಧತಿ ಮೂಲಕ ದಹನ, ದಫನ ಮಾಡುವವರನ್ನೂ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಲು ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊರೊನಾ ಸಂದರ್ಭ ಹಲವು ಸಾವುಗಳಾಗಿದ್ದು, ಆ ವೇಳೆ ವಿವಿಧ ಸ್ವಯಂಸೇವಾ ಸಂಸ್ಥೆಗಳು ಅಂತಿಮ ವಿಧಿ ವಿಧಾನ ನೆರವೇರಿಸಲು ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತವೆ. ಇದಕ್ಕೆ ಸಹಕರಿಸುವ ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಬೇಕು. ಕೊರೊನಾ ಸಂದರ್ಭ ಲಸಿಕೆಯನ್ನು ನೀಡುವ ವೇಳೆ ಇವರನ್ನು ಆದ್ಯತೆ ಮೇಲೆ ಪರಿಗಣಿಸಬೇಕು ಎಂದು ಶರೀಫ್ ಆಗ್ರಹಿಸಿದ್ದು, ಈ ಕುರಿತು ಸರ್ಕಾರ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೋವಿಡ್ ಸೋಂಕಿತರ ಅಂತ್ಯಕ್ರಿಯೆ ನಡೆಸುವವರನ್ನೂ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ: ಮಹಮ್ಮದ್ ಶರೀಫ್"
Be the first to comment on "ಕೋವಿಡ್ ಸೋಂಕಿತರ ಅಂತ್ಯಕ್ರಿಯೆ ನಡೆಸುವವರನ್ನೂ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ: ಮಹಮ್ಮದ್ ಶರೀಫ್"