ಫರಂಗಿಪೇಟೆ

ಅನಿಶಾ ಶೆಟ್ಟಿ ಅವರಿಂದ 175 ಮಂದಿಗೆ ಆಹಾರ ಕಿಟ್ ವಿತರಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರದ ಏಳನೇ ವರ್ಷಾಚರಣೆ ಹಿನ್ನೆಲೆ

1 / 6

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರ ಸ್ವೀಕಾರದ ಹಿನ್ನೆಲೆಯಲ್ಲಿ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಎದುರು ನಡೆದ ಕಾರ್ಯಕ್ರಮದಲ್ಲಿ 25ರ ಹರೆಯದ ಅನಿಶಾ ಶೆಟ್ಟಿ 175 ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು. ಕೆ.ರಮಾನಂದ ಶೆಟ್ಟಿ ಮತ್ತು ವಿಜಯಲಕ್ಷ್ಮೀ ಶೆಟ್ಟಿ ಅವರ ಪುತ್ರಿಯಾಗಿರುವ ಅನಿಶಾ ಶೆಟ್ಟಿ, ಸ್ವಂತ ಖರ್ಚಿನಿಂದ ಈ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾದ ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ ಬೆಂಜನಪದವಿನ ತನ್ನ ಮನೆಯಲ್ಲಿ ಒದಗಿಸಿದ್ದು, ಇತರ ಯುವಜನರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಕಳ್ಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧಾ ದಯಾನಂದ, ಉಪಾಧ್ಯಕ್ಷರಾದ ದಾಮೋದರ ನೆತ್ತರಕೆರೆ, ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮ,ಣ್ ಕಾಂತಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.