ಫರಂಗಿಪೇಟೆ

ಅನಿಶಾ ಶೆಟ್ಟಿ ಅವರಿಂದ 175 ಮಂದಿಗೆ ಆಹಾರ ಕಿಟ್ ವಿತರಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರದ ಏಳನೇ ವರ್ಷಾಚರಣೆ ಹಿನ್ನೆಲೆ

1 / 6

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರ ಸ್ವೀಕಾರದ ಹಿನ್ನೆಲೆಯಲ್ಲಿ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಎದುರು ನಡೆದ ಕಾರ್ಯಕ್ರಮದಲ್ಲಿ 25ರ ಹರೆಯದ ಅನಿಶಾ ಶೆಟ್ಟಿ 175 ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು. ಕೆ.ರಮಾನಂದ ಶೆಟ್ಟಿ ಮತ್ತು ವಿಜಯಲಕ್ಷ್ಮೀ ಶೆಟ್ಟಿ ಅವರ ಪುತ್ರಿಯಾಗಿರುವ ಅನಿಶಾ ಶೆಟ್ಟಿ, ಸ್ವಂತ ಖರ್ಚಿನಿಂದ ಈ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾದ ಲಾಕ್ ಡೌನ್ ನಿಂದ ತೊಂದರೆಗೊಳಗಾದವರಿಗೆ ಬೆಂಜನಪದವಿನ ತನ್ನ ಮನೆಯಲ್ಲಿ ಒದಗಿಸಿದ್ದು, ಇತರ ಯುವಜನರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಕಳ್ಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧಾ ದಯಾನಂದ, ಉಪಾಧ್ಯಕ್ಷರಾದ ದಾಮೋದರ ನೆತ್ತರಕೆರೆ, ಪುತ್ತೂರು ಜಿಲ್ಲಾ ಸಂಘಚಾಲಕ ಕೊಡ್ಮ,ಣ್ ಕಾಂತಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.