ಬಂಟ್ವಾಳ

ಬಾಳ್ತಿಲ, ಮಂಚಿ, ವಾಮದಪದವಿಗೆ ಸಹಾಯಕ ಕಮೀಷನರ್ ಭೇಟಿ

ಬಂಟ್ವಾಳ: ಕೋವಿಡ್ ಪ್ರಕರಣಗಳ ನಿರ್ವಹಣೆ ಹಾಗೂ ನಿಯಂತ್ರಣ ಕಾರ್ಯಗಳ ಪರಿಶೀಲನೆಯ ನಿಟ್ಟಿನಲ್ಲಿ ಮಂಗಳೂರು ಸಹಾಯಕ ಕಮೀಷನರ್ ಮದನ್‌ ಮೋಹನ್ ಸಿ. ಶನಿವಾರ ಬಂಟ್ವಾಳ ತಾಲೂಕಿನ 2 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಒಂದು ಕೋವಿಡ್‌ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಹಾಯಕ ಕಮೀಷನರ್ ಅವರು ಮಂಚಿ ಹಾಗೂ ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರ, ವಾಮದಪದವಿನ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದರು. ಕೇಂದ್ರಗಳಲ್ಲಿ ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯ, ಎಎನ್‌ಎಂ, ಆಶಾ ಕಾರ್ಯಕರ್ತೆಯರ ಮನೆ ಭೇಟಿ, ಗಂಟಲುದ್ರವ ಸಂಗ್ರಹ ಹಾಗೂ ಅದನ್ನು ಲ್ಯಾಬ್‌ಗೆ ತಲುಪಿಸುವ ಸೌಕರ್ಯದ ಕುರಿತು ಸ್ಥಳೀಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್‌ಕುಮಾರ್, ಗ್ರಾಮ ಕರಣಿಕರಾದ ಯಶ್ವಿತಾ, ಅಶ್ವಿನಿ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ