Uncategorized

ಬಂಟ್ವಾಳದಲ್ಲಿ ಧರ್ಮಸ್ಥಳ ಯೋಜನೆಯಿಂದ ಪ್ರಾಣವಾಯು ಯಂತ್ರ, ನೂರು ಹಾಸುಹೊದಿಕೆ ವಿತರಣೆ

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶನಿವಾರ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಎರಡು ಪ್ರಾಣವಾಯು ಯಂತ್ರ ಮತ್ತು ನೂರು ಬೆಡ್ ಶೀಟ್ ಅನ್ನು ಒದಗಿಸಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಆಶೀರ್ವಾದ, ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಯೋಜನೆ ವತಿಯಿಂದ ಈ ಕೊಡುಗೆಯನ್ನು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಅವರಿಗೆ ತಹಸೀಲ್ದಾರ್ ರಶ್ಮಿ ಎಸ್.ಆರ್ ಉಪಸ್ಥಿತಿಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹಸ್ತಾಂತರಿಸಿದರು. ಯೋಜನಾಧಿಕಾರಿ  ಜಯಾನಂದ ಪಿ  ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ, ಜನ ಜಾಗೃತಿ ವೇದಿಕೆ ಬಿಸಿರೋಡ್ ವಲಯದ ಅಧ್ಯಕ್ಷ ರೊನಾಲ್ಡ್ ಡಿಸೋಜ, ಎಂಎಲ್ ಎಸ್ ಯೋಜನಾಧಿಕಾರಿ ಮಹಾಂತೇಶ್, ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸ್ವಪ್ನ, ಬಂಟ್ವಾಳ ಮೇಲ್ವಿಚಾರಕರಾದ ಕೇಶವ ಕೆ, ಬಿಸಿರೋಡ್ ಮೇಲ್ವಿಚಾರಕರಾದ ಗೋಪಾಲ್,  ಬಿಸಿರೋಡ್ ವಲಯದ ಅಧ್ಯಕ್ಷರಾದ ಶೇಖರ ಸಾಮಾನಿ, ಬಂಟ್ವಾಳ ವಲಯದ ಅಧ್ಯಕ್ಷರಾದ ವಸಂತ ಮೂಲ್ಯ, ಸದಾನಂದ, ಸತ್ಯಪ್ರಸಾದ್ ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ