ಲಯನ್ಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದ ನಳಿನ್
ಬಂಟ್ವಾಳ: ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ಶನಿವಾರ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸೊಸೈಟಿಗಳ 18-44 ವರ್ಷದೊಳಗಿನ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ವನ್ನು ಉದ್ಘಾಟಿಸಿ ಶುಭ ಹಾರೈಸಿ, ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶಿಲ್ದಾರ್ ರಶ್ಮಿ. ಎಸ್. ಆರ್, ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಜಯಪ್ರಕಾಶ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕೆನರಾ ಬ್ಯಾಂಕ್ ಡಿ.ಜಿ.ಎಮ್, ಯೋಗೀಶ್ ಆಚಾರ್ಯ, ಕೆನರಾ ಬ್ಯಾಂಕ್ ಆಫೀಸರ್ ಆಸೊಸಿಯೇಶನ್ ಡೆಪ್ಯುಟಿ ಜನರಲ್ ಸಕ್ರೇಟರಿ ರಮೇಶ್ ನಾಯಕ್, ಕೆನರಾ ಬ್ಯಾಂಕ್ ರೀಜನಲ್ ಆಫೀಸರ್ ಮಹೇಶ್ ಕುಮಾರ್ ಎಸ್. ಸ್ವಾಮಿ, ಮ್ಯಾನೇಜರ್ ಆಶೀರ್ವಾದ್ ಆಚಾರ್ಯ, ಬ್ಯಾಂಕ್ ಆಪ್ ಬರೋಡ ಕಲ್ಲಡ್ಕ ಶಾಖೆಯ ಮ್ಯಾನೇಜರ್ ಪ್ರಣಾಮ್, ಲಯನ್ಸ್ ಅಧ್ಯಕ್ಷ ಎಮ್ ಕೃಷ್ಣ ಶ್ಯಾಮ್, ಲಯನ್ಸ್ ವಿಶೇಷ ಮಕ್ಕಳ ಶಾಲಾ ಸಂಚಾಲಕ ದಾಮೋದರ ಬಿ.ಎಮ್, ವಲಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಲಯನೆಸ್ ದೇವಿಕಾ ದಾಮೋದರ, ಕೋಶಾಧಿಕಾರಿ ದಿಶಾ ಆಶೀರ್ವಾದ್, ಮಾಜಿ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಜೊತೆ ಕೋಶಾಧಿಕಾರಿ ರಾಘವೇಂದ್ರ ಕಾರಂತ್ ಹಾಜರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…