ಬಂಟ್ವಾಳ: ಬಂಟ್ವಾಳದ ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನವನ್ನು ಭಾನುವಾರ ಆಚರಿಸಲಾಯಿತು. ತಾಲೂಕಿನ ವಿವಿಧ ಬಿಜೆಪಿ ಶಕ್ತಿಕೇಂದ್ರಗಳಲ್ಲಿ ಕಾರ್ಯಕ್ರಮ ನಡೆದವು. ಈ ಸಂದರ್ಭ ಔಷಧೀಯ ಮತ್ತು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಯುವ ಮೋರ್ಚಾ ಕ್ಷೇತ್ರ ಸಮಿತಿ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.