ಕಲ್ಲಡ್ಕ

ಗೋಳ್ತಮಜಲಿನ ಗಣೇಶ ಮಂದಿರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವ ಅರ್ಪಣೆ

ಬಂಟ್ವಾಳ: ಗೋಳ್ತಮಜಲು  ಗಣೇಶ ಮಂದಿರದಲ್ಲಿ ನಡೆದ ಗೋಳ್ತಮಜಲು ಅಮ್ಟೂರು ಗ್ರಾಮದ  ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆಯನ್ನು ಭಾನುವಾರ ಮಾಡಲಾಯಿತು.

ಕೊರೋನಾ ಮಹಾಮಾರಿಯ ಈ ಸಂಕಷ್ಟ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮಾಜದ ಜನರ ಪ್ರಾಣ ರಕ್ಷಣೆಗೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಅಭಿನಂದನಾರ್ಹರು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.  ಕಾರ್ಯಕರ್ತೆಯರಿಗೆ ನೀಡುವ ಗೌರವಧನವನ್ನು ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ  ಕೃಷ್ಣಪ್ಪ ಪೂಜಾರಿ ಹೊಸಮನೆ, ಗಿರಿಜಾ ಕೃಷ್ಣಪ್ಪ ಪೂಜಾರಿ ಮತ್ತು ನಿತಿನ್ ಕೆ  ನೀಡಿ ಸಹಕರಿಸಿದರು.ಈ ಸಂದರ್ಭ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಭಿಷೇಕ್ ನೆಟ್ಲ ಉಪಾಧ್ಯಕ್ಷರಾದ ಲಕ್ಷ್ಮೀ ವಿ ಪ್ರಭು, ಗಣೇಶ ಮಂದಿರದ ಗೌರವ ಅಧ್ಯಕ್ಷರಾದ ಶ್ಯಾಮ್ ಭಟ್ ತೋಟ, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಟೈಲರ್, ಮುರಳೀಕೃಷ್ಣ ಭಟ್, ಪುರುಷೋತ್ತಮ್ ಡಿ. ನಳಿನಿ  ಹೊಸೈಮರ್, ಸರೋಜಿನಿ ಸುಂದರ ಶೆಟ್ಟಿ  ಗೋಪಾಲಕೃಷ್ಣ ಪೂವಳ  , ದೈಹಿಕ ಶಿಕ್ಷಕರಾದ ಪುರುಷೋತ್ತಮ , ವಿಘ್ನೇಶ್ ಆಚಾರ್ಯ,ಸುಂದರ ಪೂಜಾರಿ , ಮತ್ತಿತರರು ಉಪಸ್ಥಿತರಿದ್ದರು ಮಂದಿರದ ಕೋಶಾಧಿಕಾರಿಯಾದ  ಮೋನಪ್ಪ ದೇವಸ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts