ಬಂಟ್ವಾಳ

ಎಎಂಆರ್ ನಲ್ಲಿ ನೀರು ಶೇಖರಣೆ, ಹೊರಬಿಡುವಿಕೆ: ನದಿ ತೀರವಾಸಿಗಳು ಎಚ್ಚರವಹಿಸಲು ಸೂಚನೆ

AMR DAM (File Photo)

ಬಂಟ್ವಾಳ: ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಮುಡಿಮುಗೇರಿನಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿರುವ ಎಎಂಆರ್ ಅಣೆಕಟ್ಟಿನಲ್ಲಿ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ನೀರು ಶೇಖರಿಸಲು ಜೂನ್ 8ರಿಂದ ಅಥವಾ ನಂತರದ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಎಎಂಆರ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುವುದರಿಂದ ನದಿ ತೀರದ ಆಸುಪಾಸಿನ ಜನರು ಸೂಕ್ತವಾದ ಮುಂಜಾಗರೂಕತೆ ವಹಿಸಿಕೊಳ್ಳಲು ಸೂಚಿಸಿದೆ.

ಎಎಂಆರ್ ಅಣೆಕಟ್ಟಿನಲ್ಲಿ ಶೇಖರಿಸಿದ ನೀರನ್ನು ವಿದ್ಯುಚ್ಛಕ್ತಿ ಉತ್ಪಾದನೆಗಾಗಿ ಬಳಸಿ, ಅದೇ ನೀರನ್ನು ವಾಪಸ್ ನದಿಯ ಕೆಳಭಾಗದಲ್ಲಿ ಬಿಡಲಾಗುವುದು. ಮಳೆಗಾಲದ ಆರಂಭದ ನಂತರ ನೀರಿನ ಒಳಹರಿವಿನ ಪ್ರಮಾಣವನ್ನು ಹೊಂದಿಕೊಂಡು ಅಣೆಕಟ್ಟಿಗೆ ಅಳವಡಿಸಿದ ಗೇಟುಗಳನ್ನು ತೆರೆದು, ನೀರನ್ನು ಕೆಳಭಾಗಕ್ಕೆ ಬಿಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನದಿಯ ಅಣೆಕಟ್ಟಿನ ಕೆಳಭಾಗದ ಹಾಗೂ ಮೇಲ್ಭಾಗದ ಇಕ್ಕೆಲಗಳಲ್ಲಿ ನೀರಿನ ಮಟ್ಟವು ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಏರಿಳಿತವಾಗುವುದರಿಂದ ನದಿಯ ದಡದಲ್ಲಿ ವಾಸಿಸುವ ಜನರು ಮತ್ತು ಅವರ ಸಾಕುಪ್ರಾಣಿಗಳ ಸಂರಕ್ಷಣೆ ವಿಷಯವಾಗಿ ಮುಂಜಾಗರೂಕತೆ ವಹಿಸಲು ಸೂಚಿಸಲಾಗಿದೆ. ನರಿಕೊಂಬು, ತುಂಬೆ, ಕಡೇಶಿವಾಲಯ, ಬಾಳ್ತಿಲ, ಸಜಿಪಮೂಡ, ನಾವೂರು, ಸರಪಾಡಿ, ಬರಿಮಾರು, ಸಜಿಪಮುನ್ನೂರು, ಬಂಟ್ವಾಳ ಪುರಸಭೆ ಪ್ರದೇಶಗಳ ಜನರಿಗೆ ಈ ಸೂಚನೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts