ಬಂಟ್ವಾಳ

ಎಎಂಆರ್ ನಲ್ಲಿ ನೀರು ಶೇಖರಣೆ, ಹೊರಬಿಡುವಿಕೆ: ನದಿ ತೀರವಾಸಿಗಳು ಎಚ್ಚರವಹಿಸಲು ಸೂಚನೆ

AMR DAM (File Photo)

ಬಂಟ್ವಾಳ: ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಮುಡಿಮುಗೇರಿನಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿರುವ ಎಎಂಆರ್ ಅಣೆಕಟ್ಟಿನಲ್ಲಿ ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ನೀರು ಶೇಖರಿಸಲು ಜೂನ್ 8ರಿಂದ ಅಥವಾ ನಂತರದ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಎಎಂಆರ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುವುದರಿಂದ ನದಿ ತೀರದ ಆಸುಪಾಸಿನ ಜನರು ಸೂಕ್ತವಾದ ಮುಂಜಾಗರೂಕತೆ ವಹಿಸಿಕೊಳ್ಳಲು ಸೂಚಿಸಿದೆ.

ಎಎಂಆರ್ ಅಣೆಕಟ್ಟಿನಲ್ಲಿ ಶೇಖರಿಸಿದ ನೀರನ್ನು ವಿದ್ಯುಚ್ಛಕ್ತಿ ಉತ್ಪಾದನೆಗಾಗಿ ಬಳಸಿ, ಅದೇ ನೀರನ್ನು ವಾಪಸ್ ನದಿಯ ಕೆಳಭಾಗದಲ್ಲಿ ಬಿಡಲಾಗುವುದು. ಮಳೆಗಾಲದ ಆರಂಭದ ನಂತರ ನೀರಿನ ಒಳಹರಿವಿನ ಪ್ರಮಾಣವನ್ನು ಹೊಂದಿಕೊಂಡು ಅಣೆಕಟ್ಟಿಗೆ ಅಳವಡಿಸಿದ ಗೇಟುಗಳನ್ನು ತೆರೆದು, ನೀರನ್ನು ಕೆಳಭಾಗಕ್ಕೆ ಬಿಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನದಿಯ ಅಣೆಕಟ್ಟಿನ ಕೆಳಭಾಗದ ಹಾಗೂ ಮೇಲ್ಭಾಗದ ಇಕ್ಕೆಲಗಳಲ್ಲಿ ನೀರಿನ ಮಟ್ಟವು ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಏರಿಳಿತವಾಗುವುದರಿಂದ ನದಿಯ ದಡದಲ್ಲಿ ವಾಸಿಸುವ ಜನರು ಮತ್ತು ಅವರ ಸಾಕುಪ್ರಾಣಿಗಳ ಸಂರಕ್ಷಣೆ ವಿಷಯವಾಗಿ ಮುಂಜಾಗರೂಕತೆ ವಹಿಸಲು ಸೂಚಿಸಲಾಗಿದೆ. ನರಿಕೊಂಬು, ತುಂಬೆ, ಕಡೇಶಿವಾಲಯ, ಬಾಳ್ತಿಲ, ಸಜಿಪಮೂಡ, ನಾವೂರು, ಸರಪಾಡಿ, ಬರಿಮಾರು, ಸಜಿಪಮುನ್ನೂರು, ಬಂಟ್ವಾಳ ಪುರಸಭೆ ಪ್ರದೇಶಗಳ ಜನರಿಗೆ ಈ ಸೂಚನೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts