ಬಂಟ್ವಾಳ

ಇಂಧನ ಸಾಗಾಟ ವಾಹನ ಚಕ್ರದಲ್ಲಿ ಬೆಂಕಿ, ತಪ್ಪಿದ ಅನಾಹುತ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಮುಂಭಾಗದಲ್ಲಿ ಮಂಗಳವಾರ ಸಂಜೆ ನಡೆದ ಘಟನೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಸಾಗಿಸಿಕೊಂಡು ಹೋಗುವ ಟ್ಯಾಂಕರ್ ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.

ಸಂಜೆ ಸುಮಾರು 4.30ರ ವೇಳೆ ಘಟನೆ ನಡೆದಿದ್ದು, ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಲಾಗಿದ್ದು, ಸಮೀಪದಲ್ಲೇ ಇದ್ದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಕೂಡಲೇ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾದರು. ಬೈಕಂಪಾಡಿಯಿಂದ ಬೆಂಗಳೂರಿಗೆ ಟ್ಯಾಂಕರ್ ಇಂಧನ ಹೇರಿಕೊಂಡು ಸಾಗುತ್ತಿದ್ದ ವೇಳೆ ವಾಹನದ ಚಕ್ರ ಜಾಮ್ ಆಗಿ ಬೆಂಕಿ ಕಂಡುಬಂದಿದೆ ಎನ್ನಲಾಗಿದೆ. ಆದರೆ ಕೂಡಲೇ ಚಾಲಕ ವಾಹನ ನಿಲ್ಲಿಸಿದ ಕಾರಣ ಯಾವುದೇ ಗಂಭೀರ ಅನಾಹುತ ತಲೆದೋರಲಿಲ್ಲ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ