ಬಂಟ್ವಾಳ

ಬಂಟ್ವಾಳ ಪುರಸಭೆ ವಾರ್ಡ್ 14ರ ಕೋವಿಡ್ ಕಾರ್ಯಪಡೆ ಸಭೆ

ಬಂಟ್ವಾಳ: ಬಂಟ್ವಾಳ ಪುರಸಭೆಯ ವಾರ್ಡ್ ನಂ. 14ರ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆ ವಾರ್ಡ್ ಸದಸ್ಯೆ ಹಾಗೂ ಕಾರ್ಯಪಡೆ ಅಧ್ಯಕ್ಷೆ ಝೀನತ್ ಫಿರೋಜ್ ಅಧ್ಯಕ್ಷತೆಯಲ್ಲಿ ಮಂಗಳವಾರ ಕೈಕುಂಜೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಕೈಕುಂಜೆ, ಗೂಡಿನಬಳಿಯ ಕೆಲ ಪ್ರದೇಶಗಳನ್ನು ಒಳಗೊಂಡಿರುವ ಈ ವಾರ್ಡ್ ನಲ್ಲಿ ಕೊರೊನಾ ಕಾರ್ಯಪಡೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೋವಿಡ್ ಕುರಿತು ಇರುವ ಸರ್ಕಾರದ ನಿಯಮಾವಳಿಗಳ ಕುರಿತು ಬಂಟ್ವಾಳ ಪುರಸಭೆ ಆರೋಗ್ಯ ನಿರೀಕ್ಷಕ ಜಯಶಂಕರ್ ಪ್ರಸಾದ್ ಮಾಹಿತಿ ನೀಡಿದರು. ಈ ಸಂದರ್ಭ ವಾರ್ಡ್ ನಲ್ಲಿ ಪ್ರಸ್ತುತ ನಾಲ್ಕು ಸಕ್ರಿಯ ಪ್ರಕರಣಗಳಿದ್ದು, ಎಲ್ಲವೂ ಗುಣಮುಖವಾಗುವ ಹಂತದಲ್ಲಿದೆ ಎಂಬ ಮಾಹಿತಿ ನೀಡಲಾಯಿತು. ಪುರಸಭೆಯ ಕಂದಾಯ ನಿರೀಕ್ಷಕ ಪುರುಷೋತ್ತಮ ಪುರಸಭೆ ಕೈಗೊಳ್ಳುವ ಕಾರ್ಯಗಳ ಮಾಹಿತಿ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಗುಣವತಿ ಇಲಾಖೆಯ ಮಾಹಿತಿ ನೀಡಿದರು.

ಈ ಸಂದರ್ಭ ಪುರಸಭೆ ಮಾಜಿ ಉಪಾಧ್ಯಕ್ಷ ಇಕ್ಬಾಲ್ ಗೂಡಿನಬಳಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸೌಮ್ಯಾ, ಆಶಾ ಕಾರ್ಯಕರ್ತೆ ಮೀನಾಕ್ಷಿ, ಅಂಗನವಾಡಿ ಕಾರ್ಯಕರ್ತೆ ಶ್ರೀವಾಣಿ, ಅಂಗನವಾಡಿ ಸಹಾಯಕಿ ಸವಿತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಪವಿತ್ರಾ, ಪ್ರಮುಖರಾದ ಲೋಕೇಶ್ ಸುವರ್ಣ ಅಲೆತ್ತೂರು, ಫಿರೋಜ್ ಖಾನ್ ಗೂಡಿನಬಳಿ, ಸಫೀವುಲ್ಲಾ, ಮೊಹಮ್ಮದ್ ಝಬ್ರುಲ್ಲಾ, ರಮೀಝ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts