ಬಂಟ್ವಾಳ

ಹಡೀಲು ಬಿದ್ದ ಗದ್ದೆಗಳಲ್ಲಿ ಭತ್ತದ ಕೃಷಿ: ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಪೊಳಲಿಯಲ್ಲಿ ಸಭೆ

ಬಂಟ್ವಾಳ: ಮುಂಗಾರು ಮಳೆ ಆಗಮನದಿಂದ ರೈತಾಪಿ ವರ್ಗದ ಖುಷಿಯ ಮಧ್ಯೆ ಬಂಟ್ವಾಳ ತಾಲೂಕಿನಲ್ಲಿ ಹಡಿಲು ಬಿದ್ದ ಗದ್ದೆಗಳಲ್ಲಿ ಭತ್ತದ ಕೃಷಿ ಚಟುವಟಿಕೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ರೂಪಿಸಿದ ಯೋಜನೆ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಪ್ರಥಮವಾಗಿ ಅಮ್ಮುಂಜೆ ಮತ್ತು ಕರಿಯಂಗಳ ಗ್ರಾಮದ ಕೃಷಿಕರ ಜೊತೆ ಇಲಾಖಾ ಅಧಿಕಾರಿಗಳು ಹಾಗೂ ಸ್ಥಳೀಯ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಸ್ಥಿತಿಯಲ್ಲಿ ಸಭೆ ಪೊಳಲಿ ಶ್ರೀರಾಜರಾಜೇಶ್ವರಿ ದೇವಳದ ಸರ್ವಮಂಗಳ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ದ.ಕ.ಜಿಲ್ಲೆಯಲ್ಲಿ ಹಡಿಲು ಬಿದ್ದ ಗದ್ದೆ ಯಲ್ಲಿ ಭತ್ತದ ಕೃಷಿ ಕಾರ್ಯದ ಮೂಲಕ ಕೃಷಿಗೆ ಹೆಚ್ಚು ಉತ್ತೇಜನ ನೀಡುವ ಹೊಸ ಕಲ್ಪನೆಗೆ ಪೂರಕವಾಗಿ ಭತ್ತದ ಕೃಷಿ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ ಶಾಸಕರು ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ತಾಲೂಕಿನ ಹಡಿಲು ಬಿದ್ದ ಗದ್ದೆಗಳಲ್ಲಿ ಭತ್ತದ ಕೃಷಿ ಮಾಡುವ ಹೊಸ ಯೋಜನೆಗೆ ಶಾಸಕರ ತಂಡ ,ಆಸಕ್ತ  ಕೃಷಿಕರು, ಸ್ಥಳೀಯ ಸೊಸೈಟಿ  ಹಾಗೂ ಕೃಷಿ ಇಲಾಖೆಯ ಸಹಕಾರದಿಂದ ತಯಾರಿ ಮಾಡಲಾಗಿದೆ. ಪ್ರಸ್ತುತ ಅಮ್ಮುಂಜೆ ಮತ್ತು ಕರಿಯಂಗಳ ಗ್ರಾಮದಲ್ಲಿರುವ ಹಡಿಲು ಬಿದ್ದ ಗದ್ದೆಗಳಲ್ಲಿ ಕೃಷಿ ಚಟುವಟಿಕೆಗೆ ಕ್ರಮಕೈಗೊಳ್ಳಲಾಗಿದ್ದು, ಸ್ಥಳೀಯ ವ್ಯವಸಾಯ ಸೇವಾ ಸಹಕಾರಿ ಸಂಘ ನೆರವು ನೀಡಲಿದೆ.  ಹಾಗೂ ಯಾಂತ್ರಿಕ ಉಪಕರಣಗಳನ್ನು ಪಡೆಯಲು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಭರವಸೆ ನೀಡಿದರು. ಜೊತೆಗೆ ಉತ್ತಮ ಗುಣಮಟ್ಟದ ಬೀಜ , ಕಡಿಮೆ ಬಾಡಿಗೆಯಲ್ಲಿ  ಯಂತ್ರೋಪಕರಣ ಹಾಗೂ ನರ್ಸರಿ ಭತ್ತದ ಕೃಷಿಗೆ ಬೇಕಾದ ಸಕಲ ವ್ಯವಸ್ಥೆ ಗಳನ್ನು ಕೃಷಿ ಇಲಾಖೆ ಮಾಡಲು ಸಿದ್ದವಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪೊಳಲಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್  ಸಂಪತ್ ಕುಮಾರ್ ಶೆಟ್ಟಿ , ಉಪಾಧ್ಯಕ್ಷ ವೆಂಕಟೇಶ ನಾವುಡ , ನಿರ್ದೇಶಕ ರಾದ ದೇವದಾಸ್ ಹೆಗ್ಡೆ, ಸಿ‌ಒ.ವಿಜಯರವಿ ಪೆರ್ನಾಂಡಿಸ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಕೇಶವ ಅಮ್ಮುಂಜೆ ಮತ್ತು ಕರಿಯಂಗಳ ಗ್ರಾಮದ ಕೃಷಿ ಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ