ಬಂಟ್ವಾಳ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಂಟ್ವಾಳದಲ್ಲಿ ಕಾಂಗ್ರೆಸ್ ವತಿಯಿಂದ ವಿವಿಧ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನೆ

ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ವಿವಿಧ ಘಟಕಗಳ ಸಾಥ್

ಬಂಟ್ವಾಳ: ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಇವುಗಳ ಮಹಿಳಾ ಮತ್ತು ಯುವ ಘಟಕಗಳ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್, ಬಂಟ್ವಾಳ, ಮೆಲ್ಕಾರ್ ಗಳ ಪೆಟ್ರೋಲ್ ಬಂಕ್ ಗಳ ಮುಂಭಾಗ ಶನಿವಾರ ಬೆಳಗ್ಗೆ ನಡೆಯಿತು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಉಭಯ ಬ್ಲಾಕ್ ಗಳ ಮುಂದಾಳತ್ವ ವಹಿಸಿದ್ದರೆ, ಎಲ್ಲ ಕಡೆಗಳಲ್ಲೂ ಮಾಜಿ ಸಚಿವ ಬಿ.ರಮಾನಾಥ ರೈ ಆಗಮಿಸಿ ಮಾರ್ಗದರ್ಶನ ನೀಡಿದರು. ವಿವಿಧೆಡೆಗಳಲ್ಲಿ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಮಹಮ್ಮದ್ ಶರೀಫ್, ಸುರೇಶ್ ಜೋರ, ಇಬ್ರಾಹಿಂ ನವಾಜ್ ಬಡಕಬೈಲ್, ಸುದರ್ಶನ್ ಜೈನ್, ಜಗದೀಶ್ ಕೊಯಿಲ, ಸದಾನಂದ ಶೆಟ್ಟಿ, ಮೋಹನ ಗೌಡ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಪದ್ಮನಾಭ ರೈ,ಅಲ್ಬರ್ಟ್ ಮೇನಿಜಸ್, ಬಾಲಕೃಷ್ಣ ಆಳ್ವ, ಪ್ರಶಾಂತ್ ಕುಲಾಲ್,ಶೋಭಿತ್ ಪುಂಜಾ,ಮಧುಸೂದನ್ ಶಣೈ,ಮಹಮದ್  ನಂದಾವರ, ಮೋಹನ್ ಶೆಟ್ಟಿ, ದೇವಪ್ಪ ಕುಲಾಲ್, ರವಿ ಪೂಜಾರಿ, ಕೇಶವ ಪೂಜಾರಿ,ಶೇಖರ್ ಶೆಟ್ಟಿ, ರಾಜೇಶ್ ಗೌಡ, ಪ್ರವೀಣ್, ವಿಕ್ಟರ್ ಪಾಯಸ್, ಮನೋಜ್, ದೀಪಕ್, ನವನಿತ್, ದಿನೇಶ್ ಶೆಟ್ಟಿ, ವೆಂಕಪ್ಪ ಪೂಜಾರಿ, ಶರಣ್, ಮೋನಪ್ಪ ಆಚಾರ್ಯ, ಕಾರ್ತಿಕ್, ವಿನೋದ್, ಸುಮಿತ್, ವಿಶ್ವನಾಥ್ ಶೆಟ್ಟಿ, ಉದಯ, ಚೇತನ್, ಮೋಹನ ಪೂಜಾರಿ, ಅನಿಲ್, ಇಕ್ಬಾಲ್ ಜೆಟಿಟಿ, ಸಿದ್ದೀಕ್ ಗುಡ್ಡೆಯಂಗಡಿ, ಗಂಗಾಧರ್, ಜನಾರ್ದನ ಚಂಡ್ತಿಮಾರ್, ಶರೀಫ್ ಆಲಾಡಿ, ಅಬ್ದುಲ್ ರಝಾಕ್ ಕುಕ್ಕಾಜೆ, ಅರುಣ್ ಶೆಟ್ಟಿ, ಸತೀಶ್ ಮೆಲ್ಕಾರ್, ಮಧು ಭಟ್ ಬೊಂಡಾಲ, ಮುತಾಲಿಬ್ ಆಲಡ್ಕ, ನೌಫಲ್ ಬಂಗ್ಲೆಗುಡ್ಡೆ, ರಶೀದ್ ಕತಾರ್, ತನ್ವೀರ್ ಬೋಗೋಡಿ, ಹಬೀಬ್ ಬಂಗ್ಲೆಗುಡ್ಡೆ, ಆಬಿದ್ ಬೋಗೋಡಿ, ಗಫೂರ್ ಜೆಇಟಿ, ನೌಶಾದ್ ತನ್ನಚ್ಚಿಲ್, ಬದ್ರುದ್ದೀನ್ ಆಲಡ್ಕ, ಮುಹ್ಸಿನ್ ಬೋಗೋಡಿ, ಮೊಯಿದಿ ಬೋಗೋಡಿ, ಬ್ಯಾಪ್ಟಿಸ್ಟ್ ಡಿಕುನ್ಹಾ, ರಾಯ್ ಡಿಸೋಜ , ಶರೀಫ್ ಬೂಯಾ ಮೊದಲಾದವರು ಉಪಸ್ಥಿತರಿದ್ದರು.  

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ