ಬಂಟ್ವಾಳ

ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಬಳಿ ಕ್ರಾಸಿಂಗ್ ಗೆ ತಡೆ – ಗ್ರಾಪಂ ಆಕ್ಷೇಪ ಬಳಿಕ ಅಧಿಕಾರಿಗಳ ಭೇಟಿ

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಬಳಿ ಹೆದ್ದಾರಿಯ ಕ್ರಾಸಿಂಗ್ ಅನ್ನು ಮುಚ್ಚಿದ ವಿಚಾರದ ಹಿನ್ನೆಲೆಯಲ್ಲಿ ಕಳ್ಳಿಗೆ ಗ್ರಾಪಂ ನಿಯೋಗ ಸ್ಥಳಕ್ಕೆ ತೆರಳಿ ಆಕ್ಷೇಪ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಚತುಷ್ಪಥ ಕೆಲಸ ಅರ್ಧಕ್ಕೆ ಬಾಕಿಯಾಗಿದೆ. ಕೊಟ್ಟ ಭರವಸೆಯಂತೆ ಅಂಡರ್ ಪಾಸ್ ನಿರ್ಮಿಸಿಕೊಟ್ಟಿಲ್ಲ. ಅಪಘಾತ ವಲಯದಲ್ಲಿ ಸಂಚಾರಕ್ಕೆ ಅನುವುಮಾಡಿಕೊಟ್ಟು, ಇಲ್ಲಿ ಮತ್ತೆ ಕ್ರಾಸಿಂಗ್ ತಡೆ ಮಾಡುವುದು ಸರಿಯಲ್ಲ ಎಂಬುದನ್ನು ಗ್ರಾಪಂ ನಿಯೋಗ ಗ್ರಾಪಂ ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ನೇತೃತ್ವದಲ್ಲಿ ಅಧಿಕಾರಿಗಳಿಗೆ ಮನವಿ ಮಾಡಿತು. ಬಳಿಕ ಬಂಟ್ವಾಳ ಶಾಸಕರನ್ನು ಭೇಟಿಮಾಡಿದ ನಿಯೋಗ ಸಮಸ್ಯೆ ಬಗ್ಗೆ ಶಾಸಕರ ಗಮನಸೆಳೆದರು. ಪಂಚಾಯತ್ ಸದಸ್ಯ ಮನೋಜ್ ವಳವೂರು, ಸತೀಶ್ ಬ್ರಹ್ಮರಕೂಟ್ಲು, ಮನೋಹರ ಕಂಜತ್ತೂರು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ