ಕಲ್ಲಡ್ಕ

ಕಲ್ಲಡ್ಕ ಪರಿಸರದಲ್ಲಿ ಮತ್ತೆ ಅಪಘಾತ, ಆಂಬುಲೆನ್ಸ್ ನಲ್ಲಿದ್ದವರಿಗೆ ಗಾಯ

ಟ್ಯಾಂಕರ್, ಬೈಕ್ ಮತ್ತು ಆಂಬುಲೆನ್ಸ್ ಗಳಿಗೆ ಅಪಘಾತ

ಬಂಟ್ವಾಳ: ಸೋಮವಾರ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ಅಪಘಾತ ಭೀತಿ ಎದುರಾಗುತ್ತಿದ್ದಂತೆಯೇ ಕಲ್ಲಡ್ಕ ಸಮೀಪ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ.

ಸಂಜೆ ಸುಮಾರು ಆರೂವರೆ ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಟ್ಯಾಂಕರ್, ಬೈಕ್ ಮತ್ತು ಆಂಬುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದ್ದರೆ, ಆಂಬುಲೆನ್ಸ್ ನಲ್ಲಿದ್ದವರಿಗೆ ಗಾಯಗಳುಂಟಾದವು. ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಹೃದಯರೋಗಿಯೊಬ್ಬರು ಇದ್ದು, ಇವರನ್ನು ಕೂಡಲೇ ಬದಲಿ ವ್ಯವಸ್ಥೆ ಮೂಲಕ ಕಳುಹಿಸಲಾಯಿತು. ವಾಹನ ತೆರವು ಕಾರ್ಯಾಚರಣೆ ನಡೆಯುವಾಗ ರಾತ್ರಿಯಾಗಿದ್ದು, ಬಂಟ್ವಾಳ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಯಂತ್ರಿಸಿ, ತೆರವು ಕಾರ್ಯಾಚರಣೆ ನಡೆಸಿದರು. ಅಷ್ಟು ಹೊತ್ತಿಗಾಗಲೇ ಕೆಲ ಹೊತ್ತು ವಾಹನದಟ್ಟಣೆಯೂ ಉಂಟಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ