ವಿಟ್ಲ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ಜಿಲ್ಲೆ ಸಮಿತಿ ವತಿಯಿಂದ ಕಲ್ಲಡ್ಕ, ವಿಟ್ಲ, ಸಾಲೆತ್ತೂರು, ಸಜಿಪ, ಅಡ್ಯನಡ್ಕ ಮತ್ತಿತರ ಸ್ಥಳಗಳಲ್ಲಿ ಸೋಮವಾರ ಪ್ರತಿಭಟನೆ ನಡೆದಿದೆ, ಫ್ರಂಟ್ ನ ನಾಯಕರಾದ ಆತಿಕುರ್ರಹ್ಮಾನ್,ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್ , ಆಲಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ಅವರ ಬಂಧನವಾಗಿ 250 ದಿನಗಳಾದ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ರಾಷ್ಟ್ರಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಈ ಪ್ರತಿಭಟನೆಯಾಗಿದೆ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ವಿಟ್ಲ ಜಿಲ್ಲಾಧ್ಯಕ್ಷ ಫಯಾಜ್ ಕಲ್ಲಡ್ಕ ಈ ಸಂದರ್ಭ ಹೇಳಿದ್ದಾರೆ. ಉಪಾಧ್ಯಕ್ಷ ಸಂಶುದ್ದೀನ್, ಉಪ ಕಾರ್ಯದರ್ಶಿ ಇರ್ಶಾದ್ ಮತ್ತು ಸಮಿತಿ ಸದಸ್ಯರಾದ ಮುಕ್ತಾರ್, ಹಕಮ್, ನಿಸಾರ್, ಫಯಝ್ ಹಾಗೂ ಯುನಿಟ್ ನಾಯಕರು ಕೂಡ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ವಿವಿಧೆಡೆ ಪ್ರತಿಭಟನೆ"