Uncategorized

ಮಾಣಿ ಸಮೀಪದ ಪೆಟ್ರೋಲ್ ಪಂಪ್ ಗಳಲ್ಲಿ ರೈ ನೇತೃತ್ವದಲ್ಲಿ ಪ್ರತಿಭಟನೆ

ಬಂಟ್ವಾಳ: ಮಾಣಿ ಸಮೀಪದ ಪೆಟ್ರೋಲ್ ಪಂಪ್ ಗಳಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಸೂರಿಕುಮೇರು ಮತ್ತು ದಾಸಕೋಡಿಯ ಎರಡು ಪೆಟ್ರೋಲ್ ಪಂಪ್ ಗಳಲ್ಲಿ ಪ್ರತಿಭಟನೆ ನಡೆದಿದ್ದು, ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರಗೈದರು.       ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರ ಮುಂದಾಳತ್ವದಲ್ಲಿ ಜರಗಿದ ಈ ಪ್ರತಿಭಟನೆಯಲ್ಲಿ ಮಾಣಿ ಗ್ರಾಮ ಪಂಚಾಯತ್ ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಕಡೇಶಿವಾಲಯ ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಶ್ಚಂದ್ರ, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ ರೈ, ಬರಿಮಾರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬರಿಮಾರು, ಅನಂತಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಬಾಕಿಲ, ಬಾಳ್ತಿಲ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ ಕೋರ್ಯ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ ಬಾಕಿಲ, ಸೂರಿಕುಮೇರು ಜುಮ್ಮಾ ಮಸೀದಿ ಅಧ್ಯಕ್ಷ ಮೂಸಾ ಕರೀಂ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸೇವಾ ಸಂಘದ  ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಸೀತಾ, ಪ್ರಮುಖರಾದ ಅಬ್ದುಲ್ ಅಜೀಜ್, ರಝಾಕ್ ಕೋರ್ಯ, ರಶೀದ್ ಕೋರ್ಯ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts