ಬಂಟ್ವಾಳ

ಮಂಗಳವಾರವೂ ದಿನವಿಡೀ ಮಳೆ – ಬಂಟ್ವಾಳತಾಲೂಕಿನ ಹಲವೆಡೆ ಹಾನಿ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ಸುರಿದ ಮಳೆಗೆ ಹಲವೆಡೆ ಹಾನಿ ಸಂಭವಿಸಿದೆ. ನೇತ್ರಾವತಿ ನದಿ ನೀರಿನ ಮಟ್ಟ 4.8 ಮೀಟರ್ ಆಗಿದ್ದು, ಯಾವುದೇ ಅಪಾಯವಿಲ್ಲ. ಮಂಚಿ ಗ್ರಾಮದ ಕಡಂಗಳಿ ಎಂಬಲ್ಲಿ ಭಾಗೀರತಿ ಪೂಜಾರಿ ಎಂಬವರ ಮನೆಯ ಹಿಂದಿನ ಗೋಡೆ ಕುಸಿದಿದೆ. ಅಮ್ಟಾಡಿ ಗ್ರಾಮದ ಲೋಕನಾಥ ಎಂಬವರ ಮನೆಗೆ ತಾಗಿರುವ ಹಟ್ಟಿಗೆ ಮರ ಬಿದ್ದಿದೆ. ಪಂಜಿಕಲ್ಲು ಗ್ರಾಮದ ಪಾಂಗಾಳ ಎಂಬಲ್ಲಿರುವ ಅಣ್ಣು ಸಾಲಿಯಾನ್ ಎಂಬವರ ಅಡಿಕೆ ತೋಟದಲ್ಲಿ ಹಾನಿಯಾಗಿದೆ. ಶಂಭೂರು ಗ್ರಾಮದ ರಾಧಾ ಎಂಬವರ ಮನೆಗೆ ಹಾನಿಯಾಗಿರುತ್ತದೆ.

ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮದ ಅಗ್ರಾರ್ ಇಜ್ಜ ಬಳಿ ದುಗ್ಗಮ್ಮ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ. ಇದರಿಂದ ಇವರ ಕುಟುಂಬವು ತೀವ್ರ ಸಂಕಷ್ಟಕ್ಕೀಡಾಗಿದೆ. ಅಗ್ರಾರ್ ದರ್ಬೆ ಎಂಬಲ್ಲಿ ಸಾರ್ವಜನಿಕ ಕಲ್ಲುರ್ಟಿ ದೇವಸ್ಥಾನದ ಆವರಣಗೋಡೆ ಸಂಪೂರ್ಣ ಕುಸಿದಿದೆ. ಬಂಟ್ವಾಳ ಪುರಸಭೆಯ ಒಂದನೇ ವಾರ್ಡ್ ಗೆ ಸೇರಿರುವ ಈ ಪ್ರದೇಶಗಳಿಗೆ ಪುರಸಭೆಯ ಸದಸ್ಯ ಬಿ.ವಾಸು ಪೂಜಾರಿ ಲೊರೆಟ್ಟೊ ಭೇಟಿ ನೀಡಿ, ಸ್ಥಳ ಪರಿಶೀಲಿಸಿ, ಸೂಕ್ತ ಪರಿಹಾರವನ್ನು ಸರ್ಕಾರದ ವತಿಯಿಂದ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ