![](https://i0.wp.com/bantwalnews.com/wp-content/uploads/2020/09/ಬಂಟ್ವಾಳನ್ಯೂಸ್.jpg?resize=640%2C236&ssl=1)
![](https://i0.wp.com/bantwalnews.com/wp-content/uploads/2021/06/WhatsApp-Image-2021-06-06-at-15.22.47.jpeg?resize=724%2C1024&ssl=1)
![](https://i0.wp.com/bantwalnews.com/wp-content/uploads/2021/04/WhatsApp-Image-2021-04-25-at-11.15.08-1.jpeg?resize=512%2C1024&ssl=1)
![](https://i0.wp.com/bantwalnews.com/wp-content/uploads/2021/06/WhatsApp-Image-2021-06-16-at-14.24.20.jpeg?resize=1024%2C473&ssl=1)
ಕೊರೊನಾ ಸೋಂಕು ಕಡಿಮೆ ಆಗದ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಟಾಸ್ಕ್ ಫೋರ್ಸ್ ತುರ್ತು ಸಭೆಯನ್ನು ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದು, ಶನಿವಾರ, ಭಾನುವಾರ ವಿಟ್ಲ ಪೇಟೆ ಸೇರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ.
ಹಾಲು, ಮೆಡಿಕಲ್ ಬೆಳಗ್ಗೆ 9 ಗಂಟೆವರೆಗೆ ತೆರೆಯಲು ಅವಕಾಶವಿದ್ದು, ಈ ಸಂದರ್ಭ ಬೇಕರಿ ತೆರೆಯಬಾರದು ಎಂದು ತೀರ್ಮಾನಿಸಲಾಯಿತು. ಸುರುಳಿಮೂಲೆ ಪ್ರದೇಶದಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿರುವ ವಿಚಾರವನ್ನು ಸಭೆ ಗಂಭೀರವಾಗಿ ಪರಿಗಣಿಸಿತು. ನಾಲ್ಕು ರಸ್ತೆ ಸೇರುವಲ್ಲಿ ಬಿಗು ತಪಾಸಣೆಯನ್ನು ಗುರುವಾರದಿಂದಲೇ ಮರುಜಾರಿ ಮಾಡುವ ಕುರಿತು ತೀರ್ಮಾನಿಸಲಾಗಿದ್ದು, ಬೊಬ್ಬೆಕೇರಿ, ಮೇಗಿನಪೇಟೆ, ಬಾಕಿಮಾರ್, ನಾಡಕಚೇರಿ ಈ ನಾಲ್ಕು ಸ್ಥಳದಲ್ಲಿ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಹೇಳಿದರು. ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಿಸಿ ಕಳುಹಿಸುವ ಕುರಿತು ತೀರ್ಮಾನಿಸಲಾಯಿತು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಉಷಾ ಕೃಷ್ಣಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಕಲ್ಲಕಟ್ಟ, ಸದಸ್ಯರಾದ ಅರುಣ್ ಎಂ ವಿಟ್ಲ, ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ, ರಾಮ್ ದಾಸ್ ಶೆಣೈ, ಜಯಂತ ನಾಯ್ಕ, ಹಸೈನಾರ್ ನೆಲ್ಲಿಗುಡ್ಡೆ, ಲೋಕನಾಥ ಶೆಟ್ಟಿ, ದಮಯಂತಿ, ಲತಾ ಅಶೋಕ್, ಅಬೂಬಕ್ಕರ್, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಮಾಲಿನಿ, ವಿಟ್ಲ ಪೊಲೀಸ್ ಠಾಣೆಯ ಎಎಸೈ ಕರುಣಾಕರ್, ಆರೋಗ್ಯ ಇಲಾಖೆಯ ಕುಸುಮ, ಗ್ರಾಮ ಕರಣಿಕ ಪ್ರಕಾಶ್, ಸಿಬ್ಬಂದಿ ಚಂದ್ರಶೇಖರ ವರ್ಮ ಉಪಸ್ಥಿತರಿದ್ದರು.
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಶನಿವಾರ, ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿ ಸಂಪೂರ್ಣ ‘ಲಾಕ್’"