ವಿಟ್ಲ ಪೇಟೆಯಲ್ಲಿ ಕೆಲಸವಿದೆ ಎಂದು ಬರುವವರಿಗೆ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್, ಇಲ್ಲವೇ ಕೊರೊನಾ ಟೆಸ್ಟ್ ಕಡ್ಡಾಯ ಮಾಡಿದ ವಿಟ್ಲ ಪಪಂ, ಗುರುವಾರದಿಂದಲೇ ತಪಾಸಣೆ ಆರಂಭ

ಕೊರೊನಾ ಸಂಖ್ಯೆ ಹೆಚ್ಚಳ ಹಿನ್ನೆಲೆ ಈ ಕ್ರಮ, ವಿಟ್ಲ ಮೂಲಕ ನಿತ್ಯಕೆಲಸಕ್ಕೆಂದು ಹೋಗುವವರಿಗೆ ಇಲ್ಲ – ಪಪಂ ಮುಖ್ಯಾಧಿಕಾರಿ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರ ಕೋವಿಡ್ ಪರೀಕ್ಷೆಯನ್ನು ಪಪಂ ನಡೆಸುತ್ತಿದ್ದು, ಈವರೆಗೆ ಸುಮಾರು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿತ್ತು, ವಿಟ್ಲದಲ್ಲಿ ಸುಮಾರು 62 ಸಕ್ರಿಯ ಪ್ರಕರಣಗಳಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ 80 ಮಂದಿಯ ಪರೀಕ್ಷೆ ನಡೆಸಲಾಗಿದೆ. ಉಳಿದ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ ಗಳಲ್ಲಿ ದೇಹದ ಟೆಂಪರೇಚರ್ ಪರೀಕ್ಷಿಸಲಾಯಿತು‌. ಜನರಲ್ಲಿ  ಕೊರೊನಾ ಜಾಗೃತಿ ಮೂಡಿಸಲಾಯಿತು. ಇಂದು ಒಂದೇ ಕಡೆ ತಪಾಸಣೆ ನಡೆಸಿದ್ದರೂ ನಾಳೆಯಿಂದ ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಮಾಲಿನಿ ತಿಳಿಸಿದ್ದಾರೆ. ಅನಗತ್ಯ ಸಂಚಾರ ಮಾಡುವವರಿಗಷ್ಟೇ ಈ ಕ್ರಮ, ವಿಟ್ಲವನ್ನು ಹಾದುಹೋಗುವ ನಿತ್ಯಸಂಚಾರಿಗಳ ಟೆಸ್ಟ್ ಮಾಡಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು

ಡಿವೈಎಫ್ ಐ ಆಕ್ಷೇಪ: ಜನರಿಗೆ ಯಾವುದೇ ವ್ಯವಸ್ಥೆ ಮಾಡದೆ ಕೇವಲ ಪೇಟೆ ಪ್ರವೇಶಿಸಬಾರದು ಎಂಬ ನಿಟ್ಟಿನಲ್ಲಿ ಕೊರೊನಾ ಟೆಸ್ಟ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಿರುವ ಕ್ರಮಕ್ಕೆ ಡಿವೈಎಫ್ ಐ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲ ಪೇಟೆಯಲ್ಲಿ ಕೆಲಸವಿದೆ ಎಂದು ಬರುವವರಿಗೆ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್, ಇಲ್ಲವೇ ಕೊರೊನಾ ಟೆಸ್ಟ್ ಕಡ್ಡಾಯ ಮಾಡಿದ ವಿಟ್ಲ ಪಪಂ, ಗುರುವಾರದಿಂದಲೇ ತಪಾಸಣೆ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*