ಬಾರ್ಜಾರು ತಿರುವಿನಲ್ಲಿ ಮೋರಿ ಅಳವಡಿಕೆ, ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಂಟ್ವಾಳ ಮೂಡುಬಿದಿರೆ ರಸ್ತೆಯ ಬಾರ್ಜಾರು ತಿರುವಿನಲ್ಲಿ ನಾಗರಿಕರ ಹಲವು ವರ್ಷಗಳ ಬೇಡಿಕೆಯಾಗಿದ್ದ ಮೋರಿ ಅಳವಡಿಕೆ ಮತ್ತು ರಸ್ತೆ ವಿಸ್ತರಣಾ ಕಾಮಗಾರಿಗೆ ಶುಕ್ರವಾರ ಚಾಲನೆ ದೊರಕಿದೆ.

ಬಾರ್ಜಾರು ತಿರುವು ಬಳಿ ಇರುವ ಹಡಿಲು ಬಿದ್ದಿರುವ ಭತ್ತದ ಗದ್ದೆಯಲ್ಲಿ ಕೃಷಿ ಮಾಡಲು ಸ್ಥಳೀಯ ರೈತರು ಈ ವರ್ಷ ಮುಂದೆ ಬಂದಿದ್ದು ಈ ಕಾಮಗಾರಿ ನಡೆದರೆ, ರೈತರಿಗೆ ಮತ್ತಷ್ಟು ಉಪಕಾರವಾಗಲಿದೆ. ಭಾರೀ ತಿರುವು ಮತ್ತು ಕಿರಿದಾದ ರಸ್ತೆಯಲ್ಲೇ ಮಳೆ ನೀರು ಹರಿದು ಹಲವು ಬಾರಿ ವಾಹನ ಅಪಘಾತಕ್ಕೂ ಕಾರಣವಾಗಿತ್ತು. ಇಲ್ಲಿನ ನಾಗರಿಕರ ಹಲವು ವರ್ಷಗಳ ಬೇಡಿಕೆಯಾಗಿದ್ದ ಮೋರಿ ಅಳವಡಿಕೆ ಮತ್ತು ರಸ್ತೆ ವಿಸ್ತರಣೆಗೊಳಿಸುವ ಕಾಮಗಾರಿ ಇದೀಗ ಆರಂಭಗೊಂಡಿದೆ. ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸದಸ್ಯ ಸಂತೋಷ್ ಕುಮಾರ್ ಬೆಟ್ಟು, ಪಿಡಿಒ ಮಧು, ಎಂಜಿನಿಯರ್ ಅರುಣ್ ಪ್ರಕಾಶ್, ಗುತ್ತಿಗೆಗಾರ ವಳಚ್ಚಿಲ್ ಖಾದರ್ ಮತ್ತಿತರರು ಇದ್ದರು. ಈ ಹಿನ್ನೆಲೆಯಲ್ಲಿ  ಜೂನ್ 19ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆತನಕ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೂಡುಬಿದ್ರೆ-ಸಿದ್ಧಕಟ್ಟೆಯಿಂದ ಬರುವ ವಾಹನಗಳು ಕರ್ಪೆ ಅಣ್ಣಳಿಕೆ ಮಾಗರ್ಗವಾಗಿ ಸಂಚರಿಸಬೇಕು, ವಾಮದಪದವು ಕಡೆಯಿಂದ ಬರುವ ವಾಹನಗಳು ಕರಿಮಲೆ-ಅಣ್ಣಳಿಕೆ ಮಾರ್ಗ ಬಳಸಬಹುದು. ಬಂಟ್ವಾಳ ಕಡೆಯಿಂದ ಬರುವ ವಾಹನಗಳು ಅಣ್ಣಳಿಕೆ- ಕಪೆ೯ ಮತ್ತು ಅಣ್ಣಳಿಕೆ- ಕರಿಮಲೆ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಾರ್ಜಾರು ತಿರುವಿನಲ್ಲಿ ಮೋರಿ ಅಳವಡಿಕೆ, ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*