ಕೊರೊನಾ ಸಂದರ್ಭ ಒತ್ತಡ ನಿರ್ವಹಣೆ: ಸಿದ್ಧಕಟ್ಟೆ ಸರ್ಕಾರಿ ಪ್ರ.ದರ್ಜೆ ಕಾಲೇಜಿನಲ್ಲಿ ವೆಬಿನಾರ್

ಸಿದ್ಧಕಟ್ಟೆ: ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋವಿಡ್ ಸಂದರ್ಭ ಒತ್ತಡ ನಿರ್ವಹಣೆ ಎಂಬ ಕುರಿತು ವೆಬಿನಾರ್ ನಡೆಯಿತು.ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ(ರಿ) ಬೆಂಗಳೂರು ಹಾಗೂ ಯುವ ಸ್ಪಂದನ ಕೇಂದ್ರ ಮಂಗಳೂರು ಇವುಗಳ ಆಶ್ರಯದಲ್ಲಿಕಾರ್ಯಕ್ರಮ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಯುವ ಪರಿವರ್ತಕರು ಹಾಗೂ ಜೀವನ ಕೌಶಲ್ಯ ತರಬೇತುದಾರ ಶ್ರೀಕಾಂತ್ ಪೂಜಾರಿ ಬಿರಾವು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಯ ಕೌಶಲ್ಯಗಳನ್ನು ತಿಳಿಹೇಳಿದರು.

ಕೋವಿಡ್ ಜನಜೀವನದ ಮೇಲೆ ದುಷ್ಪರಿಣಾಮ ಬೀರಿದ್ದು, ನಮ್ಮೆಲ್ಲರ ಸಾಮಾನ್ಯ ಬದುಕನ್ನು ಕಸಿದುಕೊಂಡಿದೆ. ಹೊಸ ಸವಾಲುಗಳನ್ನು ಎಸೆದಿದೆ. ಒತ್ತಡವು ಖಿನ್ನತೆ, ಒಂಟಿತನ, ಕೀಳರಿಮೆ, ಮಾನಸಿಕ ಅಶಾಂತಿ, ಹೊಟ್ಟೆಬಾಕತನ,  ಅತಿಯಾದ ಕೋಪ ಮುಂತಾದ ಸಮಸ್ಯೆಗಳನ್ನು ಸೃಷ್ಟಿಸಿ ವಿದ್ಯಾರ್ಥಿ ಜೀವನ ಹಾಳುಮಾಡುತ್ತದೆ. ಹಾಗಾಗಿ ಒತ್ತಡವನ್ನು ಯೋಗ, ಧ್ಯಾನ, ಸಣ್ಣಪುಟ್ಟ ದೈಹಿಕ ಅಭ್ಯಾಸಗಳು, ಹವ್ಯಾಸಗಳು,  ಪ್ರಕೃತಿಯೊಂದಿಗೆ ನೇರ ಒಡನಾಟ ಮುಂತಾದವುಗಳ ಮೂಲಕ ಕಡಿಮೆಮಾಡಬಹುದೆಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ  ಪ್ರಿನ್ಸಿಪಾಲ್ ಸೌಮ್ಯ ಹೆಚ್ ಕೆ ಮಾತನಾಡಿ, ಒಂದು ಕೊರೊನಾ ಹೊಸ ಬದಲಾವಣೆ ಹಾಗೂ ಸವಾಲು ಕೂಡ. ಇದರಿಂದ ಸೃಷ್ಟಿಯಾಗಿರುವ ಸಾಮಾಜಿಕ ,ಮಾನಸಿಕ, ದೈಹಿಕ ಹಾಗೂ ಭಾವನಾತ್ಮಕ ಒತ್ತಡಗಳನ್ನು ಪರಸ್ಪರ ಪ್ರೀತಿ, ಆಶಾವಾದ, ಧನಾತ್ಮಕ ಆಲೋಚನೆಗಳು ಹಾಗೂ ಸನ್ನದ್ಧತೆ ಮೂಲಕ ಎದುರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಗ್ರಂಥಪಾಲಕ ಡಾ. ಶ್ರೀನಿವಾಸ್ ಸ್ವಾಗತಿಸಿದರು. ಆಂತರಿಕಗುಣಮಟ್ಟ ಭರವಸೆ ಕೋಶದ  ಸಂಚಾಲಕ ವಿನಯ್ ಎಂ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕೊರೊನಾ ಸಂದರ್ಭ ಒತ್ತಡ ನಿರ್ವಹಣೆ: ಸಿದ್ಧಕಟ್ಟೆ ಸರ್ಕಾರಿ ಪ್ರ.ದರ್ಜೆ ಕಾಲೇಜಿನಲ್ಲಿ ವೆಬಿನಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*