ವಿಟ್ಲ ಪ್ರವೇಶಿಸುವವರ ಕೋವಿಡ್ ಟೆಸ್ಟ್: ಮೊದಲ ದಿನದ ಪರೀಕ್ಷೆಯವರೆಲ್ಲಾ ಪಾಸ್!!

ಗಂಟಲು ದ್ರವ ಮಾದರಿ ಪರೀಕ್ಷೆ ವಿಟ್ಲದಲ್ಲಿ ನಡೆಯಿತು.

ಕಳೆದ ಎರಡು ದಿನಗಳ ಹಿಂದೆ ವಿಟ್ಲ ಪ್ರವೇಶಿಸುವವರಿಗೆಲ್ಲಾ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ನಿರ್ಧರಿಸಿ ಪಟ್ಟಣ ಪಂಚಾಯಿತಿ ಗುರುವಾರ ನಡೆಸಿದ 80 ಮಂದಿಯ ಕೋವಿಡ್ ಟೆಸ್ಟ್ ನೀಡಿದವರೆಲ್ಲರಿಗೂ ನೆಗೆಟಿವ್ ವರದಿ ಬಂದಿದೆ.

ಎರಡನೇ ದಿನ ಪರೀಕ್ಷೆ ನಡೆಸಲಾದ 132 ಮಂದಿಯ ವರದಿ ಇನ್ನೂ ಬರಲು ಬಾಕಿ ಇದೆ. ಆದರೆ ವಿಟ್ಲ ಪೇಟೆಯಲ್ಲಿ ಪ್ರಕರಣಗಳ ಸಂಖ್ಯೆ ಇಳಿದಿಲ್ಲ. ಶನಿವಾರವೂ ಐವರಿಗೆ ಕೊರೊನಾ ಸೋಂಕು ತಗಲಿದೆ. ವಿಟ್ಲದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಪೇಟೆಗೆ ಬರುವ ಪ್ರತಿಯೊಬ್ಬರನ್ನು ಪರೀಕ್ಷೆಗೊಳಪಡಿಸಬೇಕೆಂದು ಹಾಗೂ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿತ್ತು‌. ವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ನಾಡಕಚೇರಿ, ಮೇಗಿನಪೇಟೆ ಮೂರು ಕಡೆಗಳಲ್ಲಿ ವಿಟ್ಲ ಸಮುದಾಯ ಆರೋಗ್ಯದ ಕೇಂದ್ರದ ಮತ್ತು ಅಳಿಕೆಯ ಸಿಬ್ಬಂದಿಗಳು ಕೋವಿಡ್ ಪರೀಕ್ಷೆ ನಡೆಸಿದ್ದರು. ಪ್ರಥಮ ದಿನ ಗುರುವಾರವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾಸರಗೋಡು ರಸ್ತೆ ಮೂಲಕ ಪೇಟೆಗೆ ಬರುವ ಒಟ್ಟು 80 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಅವರೆಲ್ಲರ ವರದಿ ನೆಗೆಟಿವ್ ಬಂದಿದೆ.

ಗುರುವಾರ 80 ಮಂದಿಯನ್ನು ಶುಕ್ರವಾರ 132 ಮಂದಿ ಸೇರಿದಂತೆ ಒಟ್ಟು 212 ಮಂದಿಯ ಪರೀಕ್ಷೆ ನಡೆಸಲಾಗಿತ್ತು. ಇನ್ನೂ 132 ಮಂದಿಯ ಪರೀಕ್ಷೆಯ ವರದಿ ಬರಲು ಬಾಕಿಯಿದೆ. ಪ್ರಥಮ 80 ಮಂದಿಯ ವರದಿ ನೆಗೆಟಿವ್ ಬಂದಿದ್ದರಿಂದ ಜನತೆ ನಿಟ್ಟುಸಿರುವ ಬಿಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ಪ್ರವೇಶಿಸುವವರ ಕೋವಿಡ್ ಟೆಸ್ಟ್: ಮೊದಲ ದಿನದ ಪರೀಕ್ಷೆಯವರೆಲ್ಲಾ ಪಾಸ್!!"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*