ವಾರದೊಳಗೆ ಬಂಟ್ವಾಳದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ: ಬಂಟ್ವಾಳ ತಾಲೂಕಿನಲ್ಲಿ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳದಲ್ಲ ನಡೆದ ಕಾರ್ಯಕ್ರಮದಲ್ಲಿ ಸೋಮವಾರ ಬೃಹತ್ ಲಸಿಕಾ ಅಭಿಯಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ ನೀಡಿದರು.

ಲಸಿಕೆ ಅಭಿಯಾನದ ಮೂಲಕ ಲಸಿಕೆ ನೀಡುವಿಕೆಗೆ ಮತ್ತಷ್ಟು ವೇಗ ದೊರಕಿದೆ. ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದ್ದು ಆದ್ಯತೆಯ ಮೇಲೆ ಪ್ರತಿಯೊಬ್ಬರಿಗೂ ನೀಡಲಾಗುವುದು, ಈಗಾಗಲೇ ಪ್ರತಿಯೊಂದು ಆರೋಗ್ಯ ಕೇಂದ್ರಗಳ ಮೂಲಕ ಜನರಿಗೆ ಲಸಿಕೆ ನೀಡುವ ಕೆಲಸವಾಗುತ್ತಿದ್ದು, ಫ್ರಂಟ್ ಲೈನ್ ವರ್ಕರ್ಸ್ ಗಳ ಕುಟುಂಬಗಳಿಗೆ 18ರಿಂದ 44ರ ವ್ಯಾಪ್ತಿಯಲ್ಲಿ ಮೊದಲ ಆದ್ಯತೆ ಪ್ರಕಾರ ನೀಡಲಾಗುತ್ತಿದ್ದು, ಶೀಘ್ರದಲ್ಲೇ ತಾಲೂಕಿನ ಎಲ್ಲ ನಾಗರಿಕರಿಗೆ ಲಸಿಕೆ ಒದಗಿಸಲಾಗುತ್ತದೆ ಎಂದವರು ತಿಳಿಸಿದರು. ಇದೇ ಸಂದರ್ಭ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಕೊಡುಗೆಯಾಗಿ ನೀಡಿದ ಹತ್ತು ಪ್ರಾಣವಾಯು ಯಂತ್ರಗಳನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಒಂದು ವಾರದೊಳಗೆ ಬಂಟ್ವಾಳ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ ಯಾಗಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಘಟಕ ಕಾಮಗಾರಿ ವೀಕ್ಷಿಸಿದ ತಿಳಿಸಿದ್ದಾರೆ.

ಬುಡ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ವೈದ್ಯರಾದ ಡಾ. ಕಿಶೋರ್, ಡಾ,ವೇಣುಗೋಪಾಲ ,ಡಾ, ಚೇತನ್, ಡಾ, ಸಂದೀಪ್ ಎ.ಎಸ್. ಸಂದೀಪ್ ಕುಡ್ವ , ಡಾ. ಪಾವನ, ಶಾಸಕರ ಕಚೇರಿ ವಾರ್ ರೂಮ್ ಪ್ರಮುಖರಾದ ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ ವಾಮದಪದವು, ನಂದರಾಮ ರೈ, ಕೇಶವ ದೈಪಲ, ಮಹೇಶ್ ಶೆಟ್ಟಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಾರದೊಳಗೆ ಬಂಟ್ವಾಳದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ: ಬಂಟ್ವಾಳ ತಾಲೂಕಿನಲ್ಲಿ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*