ಬಂಟ್ವಾಳ

ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಅಕ್ರಮ ಮರಳುಗಾರಿಕೆ ಜಾಗಕ್ಕೆ ಬಂಟ್ವಾಳ ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಮರಳು ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆದಿದ್ದು, ಈ ಸಂದರ್ಭ ಮರಳುಗಾರಿಕೆಗೆ ಬಳಸಲಾಗುತ್ತಿರುವ ಆರೋಪದಲ್ಲಿ ಎರಡು ಬೋಟ್ ಮತ್ತು ಟಿಪ್ಪರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ತಿಳಿಸಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಸುಮಾರು 12.30ರ ಬಳಿಕ ಈ ಕಾರ್ಯಾಚರಣೆಯನ್ನು ಕಂದಾಯ ಇಲಾಖೆಯ ತಂಡ ಅರಣ್ಯ ಇಲಾಖೆ ಮತ್ತು ನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ನಡೆಸಿದ್ದು, ದಾಳಿ ವೇಳೆ ಇಬ್ಬರು ಪರಾರಿಯಾಗಿದ್ದಾರೆ.

ಪಾಣೆಮಂಗಳೂರು ಹಳೇ ಸೇತುವೆಯ ಅನತಿ ದೂರದಲ್ಲೇ ಸರ್ಕಾರಿ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಕುರಿತು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ದಾಳಿ ಸಂದರ್ಭ ಬಂಟ್ವಾಳ ತಹಸೀಲ್ದಾರ್ ಜೊತೆ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಕಂದಾಯ ಇಲಾಖೆಯ ವಿಎ ಗಳಾದ ಜನಾರ್ದನ, ಧರ್ಮ, ನಾಗರಾಜ್, ಚಾಲಕ ಶಿವಪ್ರಸಾದ್, ಬಂಟ್ವಾಳ ಅರಣ್ಯ ಇಲಾಖೆಯ ಉಪವಲಯಾರಣ್ಯಾಧಿಕಾರಿ ಪ್ರೀತಂ, ಜಿತೇಶ್ ಸಿಬ್ಬಂದಿಗಳಾದ ಬಸವ, ಪ್ರವೀಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.