ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ

ದಶಕದ ಕಾಲ ನಂಬರ್ ಒನ್ ಓಟಗಾರನಾಗಿ ಪ್ರಖ್ಯಾತ

ಜಾಹೀರಾತು

ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ  ಕಿಂಜಾಲು(69) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು.
ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಉತ್ತಮ ಕೃಷಿ ಸಾಧನೆ ಮಾಡಿದ್ದರು. ಕಂಬಳಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು ಕಂಬಳ ಕ್ಷೇತ್ರದ ಅದ್ವಿತೀಯ ಸಾಧನೆಗಾಗಿ ಹಲವಾರು ಪ್ರಶಸ್ತಿ, ಸಮ್ಮಾನ ಪಡೆದಿದ್ದರು.
ಸುಮಾರು 70ರ ದಶಕದ ಆರಂಭದಲ್ಲಿ ಕಕ್ಯಪದವು ಡೀಕಯ್ಯ ಪೂಜಾರಿ, ಪುಣ್ಕೆದಡಿ ಅಣ್ಣು ಭಂಡಾರಿ ಅವರ ಕೋಣಗಳನ್ನು ಓಡಿಸುತ್ತಿದ್ದ ಅವರು ಬಳಿಕ ಕಾಡಬೆಟ್ಟು ದಿ.ನಾರಾಯಣ ರೈಅವರ ಕೋಣಗಳನ್ನು ಹಗ್ಗ ಹಿರಿಯ ವಿಭಾಗದಲ್ಲಿ ಓಡಿಸುತ್ತಿದ್ದು, ಸುಮಾರು ಒಂದೂವರೆ ದಶಕಗಳ ಕಾಲ ನಿರಂತರ ಪದಕ ಪಡೆದು ನಂಬರ್ ಒನ್ ಸ್ಥಾನದಲ್ಲಿ ವಿರಾಜಿಸಿದ್ದರು. ಆದರೆ ಯಾವುದೇ ಸಂಭಾವನೆ ಪಡೆಯದೆ ಕಂಬಳದ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿತ್ತು.ಸ್ವಾಮಿ ನಿಷ್ಠ  ಓಟಗಾರ ಎಂಬ ಗೌರವ ಯುವ ಓಟಗಾರರಿಗೆ ಮಾರ್ಗದರ್ಶಕರಾಗಿದ್ದರು.  ಅವರು 5 ವರ್ಷ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿದ್ದರು. ಕಕ್ಯಪದವು ಶ್ರೀ ಪಂಚದುರ್ಗಾ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾಗಿ, ಉಳಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ ಬ್ರಹ್ಮ ಬದರ್ಕಳ ಗರಡಿ ಜೀರ್ಣೋದ್ಧಾರ ಸಮಿತಿ ಮತ್ತು ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುತ್ತಿರುವ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿಯ ಗೌರವ ಸಲಹೆಗಾರರಾಗಿದ್ದರು. ಸ್ಥಳೀಯವಾಗಿ ಕೊಡುಗೈ ದಾನಿಯಾಗಿದ್ದರು.
ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ಕಂಬಳ ಕ್ಷೇತ್ರ ಕಂಬನಿ ಮಿಡಿದಿದೆ.  

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*