ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳೂ ಲಸಿಕೆ ಹಾಕುವ ಮೂಲಕ ಶೇ.100 ಕೊರೊನಾ ಲಸಿಕಾ ಸಾಧನೆಯನ್ನು ಸೋಮವಾರ ಮಾಡಿದೆ. ನ್ಯಾಯವಾದಿ ಸತೀಶ್ ಶಿವಗಿರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬಾಳ್ತಿಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಾ ವ್ಯಾಕ್ಸಿನ್ ನ ಕುರಿತ ಮಾಹಿತಿ ನೀಡಿದರು. ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಆಶಾ ಕಾರ್ಯಕರ್ತರು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 250 ಜನ ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದುಕೊಂಡರು. ಈ ಮೂಲಕ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಉಪನ್ಯಾಸಕರು, ಆಡಳಿತ ಮಂಡಳಿಯ ಸದಸ್ಯರು ವ್ಯಾಕ್ಸಿನ್ ಪಡೆದುಕೊಂಡಂತಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಶೇ.100 ಲಸಿಕೆ ಸಾಧನೆ"