ಬಂಟ್ವಾಳ: ಬಂಟ್ವಾಳ ತಾಲೂಕಿನ ಕೃಷಿ ಅಭಿಯಾನ ಜಾಥಾ ಹಿನ್ನೆಲೆಯಲ್ಲಿ ಕೃಷಿ ಮಾಹಿತಿ ರಥಕ್ಕೆ ಚಾಲನೆ ಹಾಗೂ ಮಾಹಿತಿಯ ಕೈಪಿಡಿ ಬಿಡುಗಡೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಕೃಷಿ ಇಲಾಖೆ ಕಚೇರಿ ಮುಂಭಾಗ ಸೋಮವಾರ ಚಾಲನೆ ನೀಡಿದರು.
ಬಂಟ್ವಾಳ ತಾಲೂಕಿನ ವಿವಿಧೆಡೆ ಗ್ರಾಮಗ್ರಾಮಗಳಲ್ಲಿ ಕೃಷಿ ಮಾಹಿತಿ ರಥ ಸಂಚರಿಸಲಿದ್ದು, ರೈತರಿಗೆ ಉಪಯೋಗವಾಗುವ ಮಾಹಿತಿಯನ್ನು ಇದರಲ್ಲಿ ಪ್ರಸಾರ ಮಾಡಲಾಗುತ್ತದೆ. ಈ ಸಂದರ್ಭ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಕೇಶವಮೂರ್ತಿ ಎಚ್, ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಅವಿನಾಶ್, ಕೃಷಿ ಅಧಿಕಾರಿ ನಂದನ್ ಶೆಣೈ, ಅಧೀಕ್ಷಕರು ಹರ್ಷ ಲಿಂಗದಾಳ್, ಪ್ರ.ದ.ಸ. ಕೇಶವ ನಾಯ್ಕ್, ತಾಂತ್ರಿಕ ವ್ಯವಸ್ಥಾಪಕರು ಶ್ರತಿ ಬಿ.ಎಂ., ವಾಹನ ಚಾಲಕ ಕಿರಣ್ ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ಕೃಷಿ ಮಾಹಿತಿ ರಥಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"