ಬಂಟ್ವಾಳದಲ್ಲಿ ರೈತ, ಜನಪರ ಚಳವಳಿಗಳ ಒಕ್ಕೂಟ ವತಿಯಿಂದ ಪ್ರತಿಭಟನೆ

ಜಾಹೀರಾತು

ಬಂಟ್ವಾಳ: ಕೇಂದ್ರ ಸರಕಾರವು ಸುಗ್ರಿವಾಜ್ನೆಗಳ ಮೂಲಕ ಕೃಷಿ ಕ್ಷೇತ್ರದ ಹೆಸರಿನಲ್ಲಿ ತಂದಿರುವ ಮೂರು ಕಾಯ್ದೆಗಳ ವಿರುದ್ಧ ರಾಷ್ಟ್ರದ್ಯಾಂತ ನಡೆಯುತ್ತಿರುವ ಹೋರಾಟಕ್ಕೆ ಜೂನ್ 26ಕ್ಕೆ ಏಳು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಸಂಯುಕ್ತ ಕಿಸಾನ್ ಮೋರ್ಚಾದಿಂದ ನಡೆಯುವ ಪ್ರತಿಭಟನೆ ಭಾಗವಾಗಿ ಸೋಮವಾರ  ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ರೈತ , ದಲಿತ, ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ  ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾದ್ಯಕ್ಷ ಒಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಮಾತನಾಡಿ ರೈತರನ್ನು ಸರಕಾರ ಕಡೆಗಣಿಸುತ್ತಿದ್ದು ಇಂತಹ ಸರಕಾರ ತೊಲಗುವವರೆಗೆ ಹೋರಾಟ ತೀವ್ರಗೊಳಿಸುವುದಾಗಿ ಕರೆ ನೀಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ  ರಾಮಣ್ಣ ವಿಟ್ಲ ಮಾತನಾಡಿ ಸರಕಾರಗಳು ಜನರ ಧ್ವನಿಯನ್ನು ಹತ್ತಿಕ್ಕಲು ಲಾಕ್ ಡೌನ್ ಹೆಸರಿನಲ್ಲಿ ಜನರನ್ನು ಬೆದರಿಸುತ್ತಿದ್ದು. ಸರಕಾರದ ಈ ಕ್ರಮದ ವಿರುದ್ಧ ಜನತೆ ದೊಡ್ಡ ಮಟ್ಟದಲ್ಲಿ ಬೀದಿಗಿಳಿಯಲಿದ್ದಾರೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಬಾಳ್ತಿಲ ವಲಯ ಅಧ್ಯಕ್ಷರಾದ ಸುರೇಂದ್ರ ಕೊರ್ಯ, ಉಪಾಧ್ಯಕ್ಷ ಆಲ್ವಿನ್ ಲೋಬೋ, ಡೇನಿಯಲ್ ಎವರೆಸ್ಟ್ ಪ್ರಾಂಕ್, ಡಿವೈಎಫ್‌ಐ ಮುಖಂಡ ತುಳಸೀದಾಸ್ ವಿಟ್ಲ, ಮಹೇಶ್ ಪೂಜಾರಿ, ಲಿಯಾಕತ್ ಖಾನ್, ತಾಬೀಸ್ ವಿಟ್ಲ, ದಿನೇಶ್ ಆಚಾರಿ ಮಾಣಿ, ಸದಾನಂದ  ಶೀತಲ್ ಮುಂತದವರು ನೇತೃತ್ವ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ರೈತ, ಜನಪರ ಚಳವಳಿಗಳ ಒಕ್ಕೂಟ ವತಿಯಿಂದ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*