ಜಿಲ್ಲಾ ಸುದ್ದಿ

ಮಂಗಳೂರು ಡಿಸಿ ಕಚೇರಿಯಲ್ಲಿ ರೆಂಜೆ ಸಸಿ ನೆಡುವ ಮೂಲಕ ಹಸಿರೋತ್ಸವ ಆಚರಣೆ

ಜಾಹೀರಾತು

ಮಂಗಳೂರು: ಕಂದಾಯ ದಿನಾಚರಣೆ ಪ್ರಯುಕ್ತ ಹಸಿರೋತ್ಸವ  ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಂದಾಯ ಇಲಾಖೆ ನೌಕರರ ಸಂಘ,ಗ್ರಾಮಲೆಕ್ಕಾಧಿಕಾರಿಗಳ ಜಿಲ್ಲಾ ಸಂಘ ಹಾಗೂ ಗ್ರಾಮಸಹಾಯಕರ ಜಿಲ್ಲಾ ಸಂಘ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅತೀ ಹೆಚ್ಚು  ಆಕ್ಸಿಜನ್ ಉತ್ಪಾದಿಸುವ ರೆಂಜೆ  ಸಸಿಯನ್ನು ನೆಡುವ ಮೂಲಕ ಜಿಲ್ಲೆಯಲ್ಲಿ ಹಸಿರೋತ್ಸವ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಪರ ಜಿಲ್ಲಾಧಿಕಾರಿ  ಡಾ:ಪ್ರಜ್ಞಾ ಅಮ್ಮೆಂಬಳ, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಮದನ್ ಮೋಹನ್ ಸಸಿ ನೆಡುವ ಮೂಲಕ ಶುಭಕೋರಿದರು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ, ಖಜಾಂಚಿಯಾದ ಪ್ರಸನ್ನ ಪಕ್ಕಳ, ಗ್ರಾಮಲೆಕ್ಕಾಧಿಕಾರಿಗಳ ಜಿಲ್ಲಾ ಸಂಘದ ಗೌರವಾಧ್ಯಕ್ಷರಾದ ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಗ್ರಾಮಸಹಾಯಕರ ಸಂಘದ ಬಂಟ್ವಾಳ ತಾಲೂಕಿನ ಅದ್ಯಕ್ಷರಾದ ಮೋಹನ್ ದಾಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧೀಕ್ಷಕರಾದ  ದಾದ ಫೈರೋಜ್ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ಮಂಜುನಾಥ ಕೆ ಎಂ ಸ್ವಾಗತಿಸಿದರು ಗ್ರಾಮಲೆಕ್ಕಾಧಿಕಾರಿಗಳ ಜಿಲ್ಲಾ ಅಧ್ಯಕ್ಷರಾದ ಜೆ ಜನಾರ್ಧನ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ