ಬಂಟ್ವಾಳದ ಸೇವಾಭಾರತಿಯಿಂದ ನಿರಂತರ 70 ದಿನಗಳ ಸೇವಾ ಕಾರ್ಯ ಅವಲೋಕನ

ಜಾಹೀರಾತು

ಬಂಟ್ವಾಳ ಸೇವಾ ಭಾರತಿಯ ತಂಡ ನಿರಂತರವಾಗಿ 70 ದಿನಗಳಿಂದ ಕೊರೊನಾ ಸಂಕಷ್ಟದ ಸಮಯದಲ್ಲಿ ದಿನದ 24 ತಾಸು ಕೊರೊನಾ ಸೋಂಕಿತರಷ್ಟೇ ಅಲ್ಲ, ಇತರ ರೋಗಿಗಳಿಗೂ ಆಂಬುಲೆನ್ಸ್ ಜೊತೆಗೆ ಸಹಾಯ ನೀಡುವ ಕಾರ್ಯವನ್ನು ನಡೆಸುತ್ತಿದ್ದು, ಇದರ ಅವಲೋಕನ ಕಾರ್ಯವನ್ನು ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಕುಲಾಲ ಭವನದಲ್ಲಿ ಸೋಮವಾರ ಸಂಜೆ ಮಾಡಲಾಯಿತು.

ಈ ಸಂದರ್ಭ ಕೋವಿಡ್ ವಾರಿಯರ್ ಗಳಾದ ವೈದ್ಯರನ್ನು ಗೌರವಿಸಲಾಯಿತು.70 ದಿನಗಳ ಕಾಲ ನಿರಂತರವಾಗಿ ದುಡಿದ ಸೇವಾ ಭಾರತಿಯ ಎಲ್ಲಾ ಕಾರ್ಯಕರ್ತರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಂಘಚಾಲಕ  ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ ನ್ನು ಮುಕ್ತಿಗೊಳಿಸುವ ಈ ಹೋರಾಟದಲ್ಲಿ  ಸೇವಾ ಭಾರತಿಯ ಕಾರ್ಯಕರ್ತರು ತಮ್ಮ ಮನೆ,ಕುಟುಂಬದ ಬಗ್ಗೆಯ ಚಿಂತಿಸದೆ ಸಮಾಜ ಗುರುತಿಸುವ ರೀತಿ ಅಭೂತಪೂರ್ವವಾಗಿ ಮಾಡಿರುವ ಸೇವೆ ಮರೆಯಲಾಗದ ಕ್ಷಣವಾಗಿದೆ ಎಂದರು.

ಜಾಹೀರಾತು

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ ಸೇವಾ ಭಾರತಿ ಕಾರ್ಯವನ್ನು ಶ್ಲಾಘಿಸಿದರು. ನಗರ ಸಂಚಾರಿ ವೈದ್ಯಕೀಯ ಘಟಕದ ವೈದ್ಯೆ ಡಾ.ಅಶ್ವಿನಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬಂಟ್ವಾಳ ಮಂಡಲ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಶೇಖರ ಶೆಟ್ಟಿ ಅಮ್ಟಾಡಿ ಅವರು ಸೇವಾ ಭಾರತಿ ಸೇವೆಯನ್ನು ಅಭಿನಂದಿಸಿದರು. ಹಿರಿಯ ಆರೆಸ್ಸೆಸ್ ಮುಖಂಡ ಅಜೇಯ ಕೊಂಬ್ರಬೈಲ್ ಶುಭ ಹಾರೈಸಿದರು.

ಹಿಂಜಾವೇ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ವರದಿ ವಾಚಿಸಿ, ಸೇವಾಭಾರತಿಯ ಚಟುವಟಿಕೆಗಳಿಗೆ ಆರೋಗ್ಯ, ಪೊಲೀಸ್, ತಾಲೂಕು ಕಚೇರಿ ಮತ್ತು ಕೋವಿಡ್ ಗೆ ಸಂಬಂಧಿಸಿದ ಎಲ್ಲ ಸರ್ಕಾರಿ ಇಲಾಖೆಗಳು ನೀಡಿದ ಸಹಕಾರವನ್ನು ನೆನಪಿಸಿಕೊಂಡರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ವಿವಿಧ ಸಂಘಟನೆಗಳ ಪ್ರಮುಖರಾದ ಜಿ.ಕೆ.ಭಟ್ , ಮಾಧವ್, ಸುರೇಶ್ ಬೆಂಜನಪದವು, ಭರತ್ ಕುಮ್ಡೇಲು, ರಾಜೇಶ್ ಬೊಳ್ಳುಕಲ್ಲು, ಪ್ರಶಾಂತ್ ಕೆಂಪುಗುಡ್ಡೆ,  ಚಂದ್ರ ಕಲಾಯಿ, ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು. ಸೇವಾಭಾರತಿ ಚಟುವಟಿಕೆ ಕುರಿತು ವಿಭಾಗ ಸಹಕಾರ್ಯವಾಹ ಜಗದೀಶ್ ಮಾತನಾಡಿದರು. ಕಳ್ಳಿಗೆ ಗ್ರಾಪಂ ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದ ಸೇವಾಭಾರತಿಯಿಂದ ನಿರಂತರ 70 ದಿನಗಳ ಸೇವಾ ಕಾರ್ಯ ಅವಲೋಕನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*