ಬಂಟ್ವಾಳ: ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೋಡುಮಾರ್ಗ ಜೇಸಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಗಿಡಗಳನ್ನು ನೆಡುವ ಮೂಲಕ ಪರಿಸರ ಉಳಿಸುವ ಕಾರ್ಯವನ್ನು ಜೇಸಿ ಮಾಡುತ್ತಿದೆ ಎಂದು ಶುಭ ಹಾರೈಸಿದರು.
ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆ ಹಾಗೂ ವಕೀಲರಾದ ಶೈಲಜಾ ರಾಜೇಶ್ ಮಾತನಾಡಿ, ಆರೋಗ್ಯ ಕಾಪಾಡುವಲ್ಲಿ ನೆರವಾಗಲಿ ಎಂದು ಹೇಳಿದರು. ನಿಕಟಪೂರ್ವಾಧ್ಯಕ್ಷ ಶ್ರೀನಿಧಿ ಭಟ್, ಪೂರ್ವಾಧ್ಯಕ್ಷ ಹರ್ಷರಾಜ್, ಕಾರ್ಯದರ್ಶಿ ಮಲ್ಲಿಕಾ ಆಳ್ವ, ಪದಾಧಿಕಾರಿಗಳಾದ ಧೀರಜ್ ಹೆಬ್ರಿ, ಹರಿಪ್ರಸಾದ್, ಹರಿಶ್ಚಂದ್ರ ಆಳ್ವ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜೋಡುಮಾರ್ಗ ಜೇಸಿಯಿಂದ ನರಿಕೊಂಬು ಪಂಚಾಯಿತಿ ವ್ಯಾಪ್ತಿಯಲ್ಲಿ ವನಮಹೋತ್ಗವ"