ಬಂಟ್ವಾಳ

ನಗ್ರಿ ಶ್ರೀ ಶಾರದಾ ಭಜನಾ ಮಂದಿರದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಬಂಟ್ವಾಳ: ನಗ್ರಿಯಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದ ಸಮುದಾಯ ಭವನವು ಶಾಸಕರ 50 ಲಕ್ಷ ರೂ ಅನುದಾನದಲ್ಲಿ ನಿರ್ಮಾಣವಾಗುತ್ತಿದ್ದು, ಇದರ ಶಿಲಾನ್ಯಾಸವನ್ನು ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ನೆರವೇರಿಸಿದರು.

ಶ್ರೀಶಾರದ ಭಜನಾ ಮಂದಿರದ ಆದ್ಯಕ್ಷ ರತ್ನಾಕರ್ ನಾಡಾರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಗ್ರಾ.ಪಂ‌, ಅದ್ಯಕ್ಷೆ ಹರಿಣಾಕ್ಷಿ, ತಾಪಂ ಮಾಜಿ ಸದಸ್ಯ ಸಂಜೀವ ಪೂಜಾರಿ, ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ಸುಂದರ ಕುಲಾಲ್ ಸಹಿತ ಸ್ಥಳೀಯ ಗ್ರಾಪಂ ಸದಸ್ಯರು, ಊರ, ಪರವೂರ ಗಣ್ಯರು ಉಪಸ್ಥಿತರಿದ್ದರು.ಸಮುದಾಯ ಭವನಕ್ಕೆ ಶ್ರಮಿಸಿದ ಯಶವಂತ ನಾಯ್ಕ ನಗ್ರಿ ಅವರನ್ನು ಗೌರವಿಸಲಾಯಿತು. ಶ್ರೀಶಾರದ ಭಜನಾ ಮಂದಿರದ ಆದ್ಯಕ್ಷ ರತ್ನಾಕರ್ ನಾಡಾರ್ ಸ್ವಾಗತಿಸಿದರು. ಶಾರದ ಯುವಕ ಮಂಡಲದ ಅಧ್ಯಕ್ಷ ಸುಂದರ ಕುಲಾಲ್ ವಂದಿಸಿದರು. ಸುರೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.